alex Certify BIG NEWS: ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ನಿಷೇಧ; ಇಲ್ಲಿದೆ ಪರ್ಯಾಯ ಮಾರ್ಗದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ನಿಷೇಧ; ಇಲ್ಲಿದೆ ಪರ್ಯಾಯ ಮಾರ್ಗದ ಮಾಹಿತಿ

ಸಕಲೇಶಪುರದ ದೋಣಿಗಾಲ್ ಬಳಿ ರಸ್ತೆ ಕುಸಿತ; ಶಿರಾಡಿಘಾಟ್‌ ರಸ್ತೆಯಲ್ಲಿ ವಾಹನ ಸಂಚಾರ ಬಂದ್‌  - News Bhandara

ಬೆಂಗಳೂರು: ಬೆಂಗಳೂರು ಹಾಗೂ ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತವುಂಟಾಗಿದ್ದು, ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮಂಗಳೂರು ತಲುಪಲು ಪರ್ಯಾಯ ಮಾರ್ಗದ ಬಗ್ಗೆ ಮಾಹಿತಿ ಇಲ್ಲಿದೆ.

ಹಾಸನದಿಂದ ಸಕಲೇಶಪುರ ಮಾರ್ಗದಲ್ಲಿ ದೋಣಿಗಲ್ ಬಳಿ ಮಂಗಳೂರಿಗೆ ಹೋಗುವ ಮಾರ್ಗದಲ್ಲಿ ಭೂಕುಸಿತವುಂಟಾಗಿದ್ದು, ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗದ ಬಗ್ಗೆ ಹಾಸನ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಲಘು ವಾಹನಗಳು ಹಾಸನದಿಂದ ಅರಕಲಗೂಡು, ಕುಶಾಲನಗರ, ಮಡಿಕೇರಿ ಹಾಗೂ ಸಂಪಾಜೆ ಮೂಲಕ ಮಂಗಳೂರಿಗೆ ತಲುಪಬಹುದು.
ಬಸ್ ಹಾಗೂ ಮಧ್ಯಮ ಪ್ರಮಾಣದ ಸರಕು ಸಾಗಣೆ ವಾಹನಗಳು ಹಾಸನದಿಂದ ಬೇಲೂರು ಮೂಡಿಗೆರೆ ಮೂಲಕ ಚಾರ್ಮಡಿಘಾಟ್ ತಲುಪಿ ಅಲ್ಲಿಂದ ಮಂಗಳೂರು ತಲುಪಬಹುದು

ಭಾರಿ ವಾಹನಗಳಾದ ಟ್ರಕ್, ಹತ್ತು ಚಕ್ರದ ಸರಕು ಸಾಗಣೆ ಭಾರಿ ವಾಹನಗಳು ಈ ಮಾರ್ಗಗಳ ಬದಲಾಗಿ ಬೇರೆ ಪರ್ಯಾಯ ಮಾರ್ಗವನ್ನು ಅನುಸರಿಸುವುದು ಉತ್ತಮ ಎಂದು ತಿಳಿಸಿದ್ದಾರೆ.

ಮುಂದಿನ ಆದೇಶದವರೆಗೆ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...