alex Certify ಕಾನೂನು ವಿದ್ಯಾರ್ಥಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾನೂನು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಕಾನೂನು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.

23 ವರ್ಷದ ಆರ್ಯಕುಮಾರ್ ನಡ್ಡಾ ಮೃತ ವಿದ್ಯಾರ್ಥಿ. ನಗರದ ಖಾಸಗಿ ಕಾಲೇಜಿನಲ್ಲಿ ಕಾನೂನು ವಿದ್ಯಾಭ್ಯಾಸ ಮಾಡುತ್ತಿದ್ದ. ಅನ್ನಪೂರ್ಣೇಶ್ವರಿ ನಗರದಲ್ಲಿ ಪಿಜಿಯಲ್ಲಿ ವಾಸವಾಗಿದ್ದ.

ಪಿಜಿಯಲ್ಲಿ ಯಾರೂ ಇಲ್ಲದಿರುವಾಗ ಆರ್ಯಕುಮಾರ್ ತಾನಿದ್ದ ರೂಮಿನಲ್ಲಿಯೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ನೇಹಿತರು ಪಿಜಿಗೆ ಬಂದು ಬಾಗಿಲು ತೆಗಿದಾಗಲೇ ಘಟನೆ ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...