alex Certify BIG NEWS: ವಿಚಾರಣೆಗೆ ಹಾಜರಾಗದೇ ಕಳ್ಳಾಟ: ಲಾಯರ್ ಕೆ.ಎನ್. ಜಗದೀಶ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಚಾರಣೆಗೆ ಹಾಜರಾಗದೇ ಕಳ್ಳಾಟ: ಲಾಯರ್ ಕೆ.ಎನ್. ಜಗದೀಶ್ ಅರೆಸ್ಟ್

ಪಣಜಿ: ಪ್ರಕರಣವೊಂದರಲ್ಲಿ ಕೋರ್ಟ್ ಗೆ ವಿಚಾರಣಗೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದ ಲಾಯರ್ ಕೆ.ಎನ್.ಜಗದೀಶ್ ಅವರನ್ನು ಗೋವಾದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ವರೆಂಟ್ ಜಾರಿಯಾದರೂ ಕೋರ್ಟ್ ಗೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಕೋರ್ಟ್ ಸೂಚನೆ ಮೇರೆಗೆ ಕೋಡಿಗೆಹಳ್ಳಿ ಪೊಲೀಸರು ಲಾಯರ್ ಜಗದೀಶ್ ರನ್ನು ಬಂಧಿಸಿದ್ದಾರೆ.

ಕೋರ್ಟ್ ಗೆ ಹಾಜರಾಗದೇ ಇದ್ದ ಹಿನ್ನೆಲೆಯಲ್ಲಿ ಜಗದೀಶ್ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಜಗದೀಶ್ ಗಾಗಿ ಹುಡುಕಾಟ ನಡೆಸಿದ್ದರು. ಇದೀಗ ಗೋವಾದಲ್ಲಿ ಪತ್ತೆಯಾಗಿದ್ದು, ಅವರನ್ನು ಬಂಧಿಸಲಾಗಿದೆ.

2022ರಲ್ಲಿ ಜಗದೀಶ್ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...