alex Certify ಬಯಲಾಯ್ತು ಮಹಾನಾಯಕನ ಆಟ, ಮಹಾನಾಯಕಿ ಕುತಂತ್ರವೂ ಬಯಲಾಗಲಿ: ಬಿಜೆಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಯಲಾಯ್ತು ಮಹಾನಾಯಕನ ಆಟ, ಮಹಾನಾಯಕಿ ಕುತಂತ್ರವೂ ಬಯಲಾಗಲಿ: ಬಿಜೆಪಿ

ಮಹಾನಾಯಕ ನಿಯಂತ್ರಿತ ಕಾಂಗ್ರೆಸ್ ಪಕ್ಷ ಈಗ ಸಿಡಿ ತಯಾರಿಸುವ ಕಾರ್ಖಾನೆಯಾಗಿದೆ. ಸಿಡಿ ಪ್ರಕರಣದ ಆರಂಭದಲ್ಲಿ ಮಹಾನಾಯಕ ಮತ್ತು ಮಹಾನಾಯಕಿ ಹೆಗಲು ಮುಟ್ಟಿ ನೋಡಿಕೊಂಡಿದ್ದರು. ಈಗ ಮಹಾನಾಯಕನ ಆಟ ಬಯಲಾಗಿದೆ. ಮಹಾನಾಯಕಿ ಕುತಂತ್ರವೂ ಬಯಲಾಗಲಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಸದನದ ಸದಸ್ಯರ ಹೆಸರು ಬಂದಿದೆ ಎಂಬ ನೆಪ ಹೇಳಿ ಸದನದಲ್ಲಿ ಕಲಾಪ ನಡೆಸಲು ಬಿಡದ ಕಾಂಗ್ರೆಸ್ ಪಕ್ಷದ ಸದಸ್ಯರು ಈಗ ಏನು ಹೇಳುತ್ತಾರೆ? ವಿಶೇಷ ಅಧಿವೇಶನ ಕರೆದು ಚರ್ಚಿಸುವಷ್ಟು ವಿಚಾರಗಳಿವೆ. ಮಹಾನಾಯಕನ ರಾಜೀನಾಮೆ ಪಡೆದು ಸದನದಲ್ಲಿ ಈ ಬಗ್ಗೆ ಯಾವುದೇ ಚರ್ಚಿಸುತ್ತೀರಿ ಎಂದು ಪ್ರಶ್ನಿಸಲಾಗಿದೆ.

ಅಧಿಕಾರಕ್ಕಾಗಿ ಯಾವ ಮಟ್ಟಕ್ಕೆ ಬೇಕಾದರೂ ಇಳಿಯಬಹುದು ಎಂದು ಮಹಾನಾಯಕ ತೋರಿಸಿಕೊಟ್ಟಿದ್ದಾರೆ. ಸ್ವಲ್ಪವಾದರೂ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ನೀಡಲಿ. ದ್ವೇಷ ಸಾಧಿಸಲು ರಾಜಕಾರಣದಲ್ಲಿ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ ಮಹಾನಾಯಕರ ಕುತಂತ್ರಕ್ಕೆ ಅಂತ್ಯ ಹಾಡಬೇಕಿದೆ. ಅನೈತಿಕ ಅಧರ್ಮ ರಾಜಕಾರಣಕ್ಕೆ ಮುನ್ನುಡಿ ಬರೆದ ಮಹಾನಾಯಕ ಕಾಂಗ್ರೆಸ್ ಜನತೆಯ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...