alex Certify ನಾಯಕತ್ವ ಬದಲಾವಣೆ ಮಾಡಲೇಬೇಕು, ಬದಲಾವಣೆಗೆ ಹೆಚ್ಚಿದ ಒತ್ತಡ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಯಕತ್ವ ಬದಲಾವಣೆ ಮಾಡಲೇಬೇಕು, ಬದಲಾವಣೆಗೆ ಹೆಚ್ಚಿದ ಒತ್ತಡ…?

ಬೆಂಗಳೂರು: ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲವೆಂದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದರೂ ತಡರಾತ್ರಿ ಅವರನ್ನು ಭೇಟಿಯಾಗಿರುವ ಕೆಲವು ಬಿಜೆಪಿ ನಾಯಕರು ನಾಯಕತ್ವ ಬದಲಾವಣೆ ಮಾಡಲೇಬೇಕು ಎಂದು ಹೇಳಿದ್ದಾರೆನ್ನಲಾಗಿದೆ.

ನಾಯಕತ್ವ ಬದಲಾವಣೆ ಮಾಡುವುದಾದರೆ ಜುಲೈಯೊಳಗೆ ಮಾಡಬೇಕು. ಇಲ್ಲವಾದರೆ ಬೇಡ ಎಂದು ಭೇಟಿಯ ವೇಳೆ ನಾಯಕರು ತಿಳಿಸಿದ್ದಾರೆ. ಕುಮಾರಕೃಪ ಅತಿಥಿಗೃಹದಲ್ಲಿ ತಂಗಿರುವ ಅರುಣ್ ಸಿಂಗ್ ಅವರನ್ನು ತಡರಾತ್ರಿ ಭೇಟಿಯಾದ ನಾಯಕರು ಈ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಆಡಳಿತ ಲೋಪ, ಕುಟುಂಬದವರ ಹಸ್ತಕ್ಷೇಪ, ಪಕ್ಷದ ಶಾಸಕರ ಕಡೆಗಣನೆ, ಸರ್ಕಾರದ ವರ್ಚಸ್ಸು, ಗೊಂದಲ, ಪಕ್ಷ ಸಂಘಟನೆ, ಪಕ್ಷದ ವರ್ಚಸ್ಸು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿ ನಾಯಕತ್ವ ಬದಲಾವಣೆಗೆ ಮನವಿ ಮಾಡಲಾಗಿದೆ. ಆದರೆ, ಅರುಣ್ ಸಿಂಗ್ ಅವರು ನಾಯಕತ್ವ ಬದಲಾವಣೆ ಇಲ್ಲವೆಂದು ನಾಯಕರಿಗೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...