alex Certify BIG NEWS: ಖ್ಯಾತ ರಂಗಕರ್ಮಿ ದಂಪತಿಯ ಸಾಕುಮಗಳು ನಾಪತ್ತೆ ಪ್ರಕರಣ; ಸ್ನೇಹಿತ ಸೇರಿ ನಾಲ್ವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಖ್ಯಾತ ರಂಗಕರ್ಮಿ ದಂಪತಿಯ ಸಾಕುಮಗಳು ನಾಪತ್ತೆ ಪ್ರಕರಣ; ಸ್ನೇಹಿತ ಸೇರಿ ನಾಲ್ವರು ಅರೆಸ್ಟ್

ಉಡುಪಿ: ಸಾಕುಮಗಳು ನಾಪತ್ತೆ ಪ್ರಕರಣದ ಬೆನ್ನಲ್ಲೇ ಖ್ಯಾತ ರಂಗಕರ್ಮಿ, ಸಮಾಜಸೇವಕ ಲೀಲಾಧರ್ ಶೆಟ್ಟಿ ಹಾಗೂ ಪತ್ನಿ ವಸುಂಧರಾ ಶೆಟ್ಟಿ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬಂಧಿದಂತೆ ನಾಲ್ವರು ಆರೋಪಿಗಳನ್ನು ಉಡುಪಿ ಜಿಲ್ಲೆಯ ಕಾಪು ಪೊಲೀಸರು ಬಂಧಿಸಿದ್ದಾರೆ.

ನಾಪತ್ತೆಯಾಗಿದ್ದ ಸಾಕುಮಗಳ ಸ್ನೇಹಿತ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಶಿರ್ವ ನಿವಾಸಿ ಯುವತಿ ಸ್ನೇಹಿತ ಗಿರೀಶ್ (20), ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹಮ್ಮದ್ ಅಝೀಜ್ ಎಂದು ಗುರುತಿಸಲಾಗಿದೆ.

ಲೀಲಾಧರ್ ಶೆಟ್ಟಿ ದಂಪತಿಯ 16 ವರ್ಷದ ಸಾಕುಮಗಳು ನಾಪತ್ತೆಯಾಗಿರುವ ನೋವಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಕಾಪು ಠಾಣೆಯಲ್ಲಿ ಸಾಕುಮಗಳು ನಾಪತ್ತೆ ಹಿನ್ನೆಲೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು. ಇದೀಗ ನಾಲ್ವರು ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಕುಂಬ್ಳೆಬಳಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಗಿರೀಶ್ ವಿರುದ್ಧ ಪೋಕ್ಸೋ ಕಾಯ್ದೆ, ಅತ್ಯಾಚರ ಹಾಗೂ ಕಿಡ್ನ್ಯಾಪ್ ಪ್ರಕರಣ ದಾಖಲಾಗಿದೆ. ಇತರ ಮೂವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...