alex Certify ಚಿರತೆ ಬಾಯಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕಂದಮ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿರತೆ ಬಾಯಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕಂದಮ್ಮ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಒಂದೂವರೆ ವರ್ಷದ ಮಗುವನ್ನು ಚಿರತೆಯೊಂದು ಎಳೆದೊಯ್ಯಲು ಯತ್ನಿಸಿದ ಘಟನೆ ನಡೆದಿದೆ.

ಕಾಡಂಚಿನ ನಾರಾಯಣ ನಾಯಕ್ ಅವರ ಮನೆಯೊಳಗೆ ನುಗ್ಗಿದ ಚಿರತೆ ಮಗುವನ್ನು ಎಳೆದೊಯ್ಯಲು ಪ್ರಯತ್ನಿಸಿದಾಗ ಮಗುವಿನ ಅಜ್ಜ ಧೈರ್ಯ ತೋರಿ ಮಗುವನ್ನು ರಕ್ಷಿಸಿದ್ದಾರೆ.

ರಾತ್ರಿ 9 ಗಂಟೆ ವೇಳೆಗೆ ಮನೆಯವರು ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಮನೆಯೊಳಗೆ ಪ್ರವೇಶಿಸಿದ ಚಿರತೆ ಮನೆಯ ತುಂಬಾ ಓಡಾಡಿದೆ. ಮನೆಯವರು ಕೂಗಾಡಿದ್ದರಿಂದ ಗಾಬರಿಯಾದ ಚಿರತೆ ಅಲ್ಲೇ ಆಡುತ್ತಿದ್ದ ಮಗುವನ್ನು ಎಳೆದೊಯ್ಯಲು ಪ್ರಯತ್ನಿಸಿದೆ. ಮಗುವಿನ ಅಜ್ಜ ಧೈರ್ಯ ತೋರಿಸಿ ಮಗುವನ್ನು ರಕ್ಷಿಸಿದ್ದಾರೆ. ಚಿರತೆ ಕಾಣಿಸಿಕೊಂಡ ಬಗ್ಗೆ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಚಿರತೆ ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...