alex Certify ಮೆಕ್ಕೆಜೋಳದ ಹೊಲದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮಹಿಳೆ ಕುತ್ತಿಗೆಗೆ ಬಾಯಿ ಹಾಕಿ ರಕ್ತ ಹೀರಿ 1 ಕಿಮೀ ಎಳೆದೊಯ್ದ ಚಿರತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಕ್ಕೆಜೋಳದ ಹೊಲದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮಹಿಳೆ ಕುತ್ತಿಗೆಗೆ ಬಾಯಿ ಹಾಕಿ ರಕ್ತ ಹೀರಿ 1 ಕಿಮೀ ಎಳೆದೊಯ್ದ ಚಿರತೆ

ದಾವಣಗೆರೆ: ದಾವಣಗೆರೆ ಜಿಲ್ಲೆ, ನ್ಯಾಮತಿ ತಾಲೂಕಿನ ಫಲವನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ.

ಕಮಲಿಬಾಯಿ(55) ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಮೆಕ್ಕೆಜೋಳದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ದಾಳಿ ಮಾಡಿದ ಚಿರತೆ ಕುತ್ತಿಗೆಗೆ ಬಾಯಿ ಹಾಕಿ ರಕ್ತ ಹೀರಿ 1 ಕಿಲೋ ಮೀಟರ್ ವರೆಗೆ ಎಳೆದುಕೊಂಡು ಹೋಗಿದೆ. ಕಮಲಿಬಾಯಿ ಕಳೆ ತೆಗೆಯುತ್ತಿದ್ದ ವೇಳೆಯಲ್ಲಿ ದಾಳಿ ಮಾಡಿದ ಚಿರತೆ ಕೂಗಿಕೊಳ್ಳಲು ಆಸ್ಪದ ನೀಡದೆ ಕುತ್ತಿಗೆಗೆ ಬಾಯಿ ಹಾಕಿದೆ. ಒಂದು ಕಿಲೋಮೀಟರ್ ದೂರದವರೆಗೆ ಎಳೆದುಕೊಂಡು ಹೋಗಿ ರಕ್ತ ಹೀರಿದೆ. ಕಮಲಿಬಾಯಿ ಕಾಣದಿದ್ದಾಗ ಮನೆಯವರು ಹುಡುಕಾಟ ನಡೆಸಿದ್ದಾರೆ. 1 ಕಿಮೀ ದೂರದಲ್ಲಿ ಮೃತದೇಹ ಕಂಡುಬಂದಿದ್ದು ಗ್ರಾಮಸ್ಥರು ಚಿರತೆ ಸೆರೆಗೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...