alex Certify BREAKING : 2 ವರ್ಷಗಳಿಂದ ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ : ಹಿಂದೂ ಸಂಘಟನೆಯ ಸಂಚಾಲಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 2 ವರ್ಷಗಳಿಂದ ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ : ಹಿಂದೂ ಸಂಘಟನೆಯ ಸಂಚಾಲಕ ಅರೆಸ್ಟ್

ಬೆಂಗಳೂರು : ಸಾಹಿತಿಗಳಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಂಧಿಸಲಾಗಿದ್ದು, 10 ದಿನ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.

ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತನನ್ನು ಹಿಂದೂ ಸಂಘಟನೆಯ ಸಂಚಾಲಕ ಶಿವಾಜಿರಾವ್ ಜಾಧವ್ ಎಂದು ಗುರುತಿಸಲಾಗಿದೆ.

ಒಟ್ಟು 7 ಪ್ರಕರಣಗಳನ್ನು ಸಿಸಿಬಿಗೆ ನೀಡಿ ಆದೇಶ ಮಾಡಲಾಗಿತ್ತು. ಕುಂ.ವೀರಭದ್ರಪ್ಪ, ಬಿ.ಟಿ.ಲಲಿತ ನಾಯಕ್, ಬಂಜಗೆರೆ ಸೇರಿದಂತೆ ಎಡ ಪಂಥೀಯ ವಿಚಾರವುಳ್ಳ ಸಾಹಿತಿಗಳಿಗೆ ಬೆದರಿಕೆ ಹಾಕಲಾಗಿತ್ತು. ನಿಮ್ಮನ್ನು ಯಾಕೆ ಕೊಲೆ ಮಾಡಬಾರದು? ನಿಮ್ಮನ್ನು ಯಾಕೆ ಗುಂಡಿಟ್ಟು ಕೊಲ್ಲಬಾರದು? ಎಂದು ಶಿವಾಜಿ ರಾವ್ ಪತ್ರ ಕಳೆದ 2 ವರ್ಷಗಳಿಂದ ಬೆದರಿಕೆ ಪತ್ರ ಬರೆಯುತ್ತಿದ್ದನು. ನಂತರ ಪ್ರಕರಣವನ್ನು ರಾಜ್ಯ ಸರ್ಕಾರ ಸಿಸಿಬಿಗೆ ವರ್ಗಾಯಿಸಿ ಆದೇಶ ಹೊರಡಿಸಿತ್ತು.

 

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...