alex Certify ವಾರದೊಳಗೆ ಲೋಡ್ ಶೆಡ್ಡಿಂಗ್ ಸಮಸ್ಯೆಗೆ ಪರಿಹಾರ; ಕೃಷಿ ಸಚಿವ ಚಲುವರಾಯಸ್ವಾಮಿ ಭರವಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾರದೊಳಗೆ ಲೋಡ್ ಶೆಡ್ಡಿಂಗ್ ಸಮಸ್ಯೆಗೆ ಪರಿಹಾರ; ಕೃಷಿ ಸಚಿವ ಚಲುವರಾಯಸ್ವಾಮಿ ಭರವಸೆ

ಉಡುಪಿ: ವಿದ್ಯುತ್ ಉತ್ಪಾದನೆ ಕಡಿಮೆಯಾಗಿರುವುದರಿಂದ ರಾಜ್ಯದಲ್ಲಿ ತೊಂದರೆ ಎದುರಾಗಿದೆ. ಲೋಡ್ ಶೆಡ್ದಿಂಗ್ ಸಮಸ್ಯೆಯನ್ನು ಶೀಘ್ರದಲ್ಲಿಯೇ ಪರಿಹರಿಸುವುದಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಒಂದು ವಾರದೊಳಗೆ ಲೋಡ್ ಶೆಡ್ಡಿಂಗ್ ಸಮಸ್ಯೆ ಬಗೆಹರಿಸುವ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ. ಬಯಲು ಸೀಮೆ ಕಡೆ ಕೂಡ ತುಂಬಾ ಸಮಸ್ಯೆಯಾಗಿದೆ. ಅದನ್ನೂ ಸರಿಪಡಿಸಬೇಕಿದೆ. ಶೀಘ್ರದಲ್ಲಿಯೇ ವಿದ್ಯುತ್ ಸಮಸ್ಯೆ ಪರಿಹರಿಸಲಾಗುವುದು ಎಂದರು.

ವಿದ್ಯುತ್ ಖರೀದಿ ಬಗ್ಗೆ ಚಿಂತನೆಗಳು ನಡೆದಿವೆ. ದುಬಾರಿಯಾದರೂ ವಿದ್ಯುತ್ ಖರೀದಿ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ತ್ವರಿತವಾಗಿ ಕ್ರಮಕೈಗೊಳ್ಳಲಾಗುತ್ತದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...