alex Certify ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 20 ಸಾವಿರ ರೂ. ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 20 ಸಾವಿರ ರೂ. ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ: ಕೊಪ್ಪಳ ನಗರಸಭೆ ವತಿಯಿಂದ ಪ್ರಸಕ್ತ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ-ನಲ್ಮ್ ಅಭಿಯಾನದಡಿ ಬೀದಿಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕೊಪ್ಪಳ ನಗರಸಭೆ ವತಿಯಿಂದ 2021-22ನೇ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ-ನಲ್ಮ್ ಅಭಿಯಾನದಡಿ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಬೀದಿಬದಿ ವ್ಯಾಪಾರಿಗಳ ‘ಆತ್ಮ ನಿರ್ಭರ್ ನಿಧಿ(ಪಿ.ಎಂ.ಎಸ್.ವಿ.ಎ ನಿಧಿ) ಯೋಜನೆ’ ಅಡಿಯಲ್ಲಿ ಈಗಾಗಲೇ 10,000 ರೂ. ಸಾಲ ಪಡೆದು ಬ್ಯಾಂಕಿಗೆ ಮರು ಪಾವತಿಸಿದವರಿಗೆ 2 ನೇ ಬಾರಿಗೆ 20,000 ರೂ. ಸಾಲ ಒದಗಿಸಲಾಗುತ್ತಿದೆ.

ಅಪೇಕ್ಷಿತರು ಈ ಹಿಂದೆ ಬ್ಯಾಂಕ್‌ ನಿಂದ ಪಡೆದ ಸಾಲ ಸಂಪೂರ್ಣ ಮರು ಪಾವತಿಸಿದ ಕುರಿತು ಪ್ರಮಾಣ ಪತ್ರವನ್ನು ಪಡೆದು ಅರ್ಜಿ ಜೊತೆಗೆ ಲಗತ್ತಿಸಿ ಅರ್ಜಿ ಸಲ್ಲಿಸಬಹುದು. ಇನ್ನೂ ಸಾಲವನ್ನೆ ಪಡೆಯದ ಫಲಾನುಭವಿಗಳು ಅರ್ಜಿ ಹಾಕದಿದ್ದಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಗೆ ವೇಳೆಯಲ್ಲಿ ಸಂಪರ್ಕಿಸಬೇಕು ಎಂದು ಕೊಪ್ಪಳದ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...