alex Certify ಕಠಿಣ ಲಾಕ್ ಡೌನ್ ಜಾರಿ: ಅಂತರಜಿಲ್ಲಾ ಸಂಚಾರಕ್ಕೆ ಅನುಮತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಠಿಣ ಲಾಕ್ ಡೌನ್ ಜಾರಿ: ಅಂತರಜಿಲ್ಲಾ ಸಂಚಾರಕ್ಕೆ ಅನುಮತಿ

ಬೆಂಗಳೂರು: ಕೊರೋನಾ ಸೋಂಕು ತಡೆಗೆ ರಾಜ್ಯದಲ್ಲಿ ಲಾಕ್ಡೌನ್ ವಿಸ್ತರಣೆ ಮಾಡಲಾಗಿದ್ದು, ಪ್ರಸ್ತುತ ಇರುವ ಕಠಿಣ ನಿಯಮಗಳೇ ಮುಂದುವರೆಯಲಿದೆ. ಲಾಕ್ಡೌನ್ ಅವಧಿಯಲ್ಲಿ ಅಂತರರಾಜ್ಯ ಮತ್ತು ಅಂತರ ಜಿಲ್ಲಾ ಸಂಚಾರಕ್ಕೆ ಷರತ್ತುಬದ್ಧ ಅವಕಾಶ ನೀಡಲಾಗಿದೆ. ಅನುಮತಿ ಪಡೆದವರು ಮಾತ್ರ ಪ್ರಯಾಣಿಸಬಹುದಾಗಿದೆ. ಸರಕು ವಾಹನಗಳ ಸಂಚಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ.

ಕಠಿಣ ನಿರ್ಬಂಧ ಜಾರಿಗೊಳಿಸುವ ಸಂಪೂರ್ಣ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಪರಿಸ್ಥಿತಿ ಆಧರಿಸಿ ಹೆಚ್ಚುವರಿ ಕಠಿಣ ನಿಯಮ ಜಾರಿಗೊಳಿಸಬಹುದಾಗಿದೆ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ತಜ್ಞರ ಸಮಿತಿ ಸಲಹೆ ಆಧರಿಸಿ ಮೇ 24 ರಿಂದ ಜೂನ್ 7 ರ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಅನಗತ್ಯ ಸಂಚಾರಕ್ಕೆ ಬ್ರೇಕ್ ಹಾಕಲು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...