ಬೆಂಗಳೂರು : ಲೋಕಸಭಾ ಚುನಾವಣೆಗೆ ಮುಹೂರ್ತ ನಿಗದಿಯಾದ ಹಿನ್ನೆಲೆ ಬೆಂಗಳೂರಿನಲ್ಲಿ ಮಾದರಿ ನೀತಿಸಂಹಿತೆ ಜಾರಿಗೆ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.
ಮಾದರಿ ನೀತಿ ಸಂಹಿತೆ ಉಲ್ಲಘನೆಗಳ ಮೇಲೆ ನಿಗಾವಹಿಸಲು ಸೂಚನೆ ನೀಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ, ತೆಗೆಯಲು ಸೂಚನೆ ನೀಡಿದ್ದಾರೆ, ಕಛೇರಿ, ಸರ್ಕಾರಿ ಜಾಗ ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ಹಾಗೂ ಜಾಹೀರಾತುಗಳನ್ನ ತೆಗೆಯಲು ಸೂಚನೆ ನೀಡಲಾಗಿದೆ.
ಯಾವುದೇ ಫ್ಲೆಕ್ಸ್, ಪೋಸ್ಟರ್, ಇರುವಂತಿಲ್ಲ. ಕುಡಿಯುವ ನೀರಿನ ಘಟಕ, ಉದ್ಯಾನವನ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಇರುವಂತಿಲ್ಲ , ಎಲ್ಲಾ ಬ್ಯಾನರ್, ಭಾವಚಿತ್ರ ಹಾಗೂ ಜಾಹೀರಾತುಗಳನ್ನ ತೆಗೆಯಲು ಸೂಚನೆ ನೀಡಿದ್ದಾರೆ.