alex Certify BREAKING: ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಗೋಣಿ ಚೀಲದಲ್ಲಿ ಸಾಗಿಸುತ್ತಿದ್ದ ಅಪಾರ ಹಣ ಜಪ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಗೋಣಿ ಚೀಲದಲ್ಲಿ ಸಾಗಿಸುತ್ತಿದ್ದ ಅಪಾರ ಹಣ ಜಪ್ತಿ

ಬೆಳಗಾವಿ: ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಬೆಳಗಾವಿ ಪೊಲೀಸರು ಹೈ ಅಲರ್ಟ್ ಆಗಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಎರಡು ಲಕ್ಷ ರೂಪಾಯಿ ವಶಕ್ಕೆ ಪಡೆದುಕೊಂಡಿದ್ದಾರೆ.

ದಾಖಲೆ ಇಲ್ಲದೆ ಗೋಣಿಚೀಲದಲ್ಲಿ ಸಾಗಿಸುತ್ತಿದ್ದ ಎರಡು ಲಕ್ಷ ರೂಪಾಯಿ ಜಪ್ತಿ ಮಾಡಿದ್ದಾರೆ. ಹಳ್ಳೂರು ಚೆಕ್ ಪೋಸ್ಟ್ ನಲ್ಲಿ ಮೂಡಲಗಿ ಪೊಲೀಸರು ಹಣ ಜಪ್ತಿ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರು ಚೆಕ್ಪೋಸ್ಟ್ ನಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಒಂದು ಆಲ್ಟೊ ಕಾರ್ ಜಪ್ತಿ ಮಾಡಿ, ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...