alex Certify ಮತದಾನಕ್ಕೆ ಬಂದಿದ್ದ ಮಹಿಳೆಗೆ ಹೃದಯಸ್ತಂಭನ; ಜೀವ ಉಳಿಸಿದ ಸ್ಥಳದಲ್ಲಿದ್ದ ವೈದ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾನಕ್ಕೆ ಬಂದಿದ್ದ ಮಹಿಳೆಗೆ ಹೃದಯಸ್ತಂಭನ; ಜೀವ ಉಳಿಸಿದ ಸ್ಥಳದಲ್ಲಿದ್ದ ವೈದ್ಯ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದಿದ್ದು, ಬೆಂಗಳೂನಲ್ಲಿ ಮತದಾನಕ್ಕೆ ಮತಗಟ್ಟೆಗೆ ಆಗಮಿಸಿದ್ದ ಮಹಿಳೆಗೆ ಹೃದಯಸ್ತಂಭನವಾಗಿದೆ.

ಜಿ.ಪಿ.ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಗೆ ಮತದಾನ ಮಾಡಲು ಆಗಮಿಸಿದ ಮಹಿಳೆಯೊಬ್ಬರಿಗೆ ಹೃದಯಸ್ತಂಭನವಾಗಿದೆ. ಇದೇ ಮತಗಟ್ಟೆಗೆ ಮತದಾನ ಮಾಡಲು ಆಗಮಿಸಿದ್ದ ವೈದ್ಯರೊಬ್ಬರು ಮಹಿಳೆಯ ಜೀವ ಉಳಿಸಿದ್ದಾರೆ.

ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ.ಗಣೇಶ್ ಶ್ರೀನಿವಾಸ್ ಪ್ರಸಾದ್ ಜೀವ ಉಳಿಸಿದ್ದಾರೆ.

ಮತಗಟ್ಟೆಗೆ ಮತದಾನಕ್ಕೆ ಬಂದಿದ್ದ 50 ವರ್ಷದ ಮಹಿಳೆಯೊಬ್ಬರು ಆಯಾಸಗೊಂಡು ನೀರು ಕುಡಿಯಲು ಬಂದಿದ್ದರು. ಈ ವೇಳೆ ಕುಸಿದು ಬಿದ್ದಿದ್ದಾರೆ. ಉಸಿರುಗಟ್ಟಿ ದೇಹದಲ್ಲಿ ಚಲನವಲನವಿರಲಿಲ್ಲ. ತಕ್ಷಣ ಸಿಪಿಆರ್ ಮಾಡಿದ ವೈದ್ಯ ಗಣೇಶ್, ಮಹಿಳೆ ಚೇತರಿಸಿಕೊಳ್ಳುವಂತೆ ಮಾಡಿದರು. ಬಳಿಕ ಮತದಾನ ಮಾಡಿದ ನಂತರ ಮಹಿಳೆಯನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಯಿತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...