alex Certify 80 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

80 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ

ಬೆಂಗಳೂರು: 80 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಭೂಮಾಪಕ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಲಂಚ ಪಡೆಯುತ್ತಿದ್ದ ಭೂಮಾಪಕ ಅಧಿಕಾರಿ ವೀರಣ್ಣ ಬಲೆಗೆ ಬಿದ್ದವರು. ಮೂರು ಎಕರೆ ಜಮೀನು ಪೋಡಿ ಮಾಡಿಕೊಡಲು ಅವರು ಲಂಚ ಸ್ವೀಕರಿಸುತ್ತಿದ್ದರು. ಮಧ್ಯವರ್ತಿ ಸತೀಶ್ ಕೂಡ ಬಲೆಗೆ ಬಿದ್ದಿದ್ದಾರೆ. ಮೊದಲು 20 ಸಾವಿರ ರೂ. ಪಡೆದುಕೊಂಡಿದ್ದು, ಬಾಕಿ ಉಳಿದ 80 ಸಾವಿರ ರೂ.ಗಾಗಿ ಪೀಡಿಸಿದ್ದರು. ಈ ಕುರಿತು ಲೋಕಾಯುಕ್ತರಿಗೆ ನಂದೀಶ್ ದೂರು ನೀಡಿದ್ದು, 80 ಸಾವಿರ ರೂ. ಲಂಚದ ಹಣ ಸ್ವೀಕರಿಸುವಾಗ ವೀರಣ್ಣ ಸಿಕ್ಕಿ ಬಿದ್ದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...