alex Certify ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಧೋರಣೆ ಸಲ್ಲದು; ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಧೋರಣೆ ಸಲ್ಲದು; ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು: ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ವಿಳಂಬವಾಗುತ್ತಿರುವ ಬಗ್ಗೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಗ್ಗೆ ಕ್ರಮ ವಹಿಸುವಂತೆ ಸೂಚಿಸಿದರು.

ವಿವಿಧ ಪ್ರಕರಣಗಳಲ್ಲಿ ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಧೋರಣೆ ಅನುಸರಿಸುತ್ತಿರುವುದು ಸಲ್ಲದು. ಇದರಿಂದ ಜನತೆಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ಆದ್ದರಿಂದ ತ್ವರಿತ ತೀರ್ಮಾನ ಕೈಗೊಂಡು ಲೋಕಾಯುಕ್ತರಿಗೆ ಆದೇಶಗಳನ್ನು ಕಳುಹಿಸುವಂತೆ ಸೂಚಿಸಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಇದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...