alex Certify Lokayukta Raid : ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ ‘ಲೋಕಾಯುಕ್ತ’ : ಕೊಡಗು ಅಪರ ಜಿಲ್ಲಾಧಿಕಾರಿ ನಿವಾಸದಲ್ಲಿ ಕಂತೆ ಕಂತೆ ನೋಟು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Lokayukta Raid : ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ ‘ಲೋಕಾಯುಕ್ತ’ : ಕೊಡಗು ಅಪರ ಜಿಲ್ಲಾಧಿಕಾರಿ ನಿವಾಸದಲ್ಲಿ ಕಂತೆ ಕಂತೆ ನೋಟು ಪತ್ತೆ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಕೊಡಗು ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ದಾಳಿ ವೇಳೆ ನಂಜುಂಡೇಗೌಡ ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. ದಾಳಿ ವೇಳೆ ನಂಜುಂಡೇಗೌಡ ಮನೆಯಲ್ಲಿ 11.5 ಲಕ್ಷ ರೂಪಾಯಿ ನಗದು ಹಾಗೂ ಸಾಕಷ್ಟು ಚಿನ್ನಾಭರಣ ಪತ್ತೆಯಾಗಿದೆ. ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜನೀಯರ್ ಕೆ.ಮಹೇಶ್ ನಿವಾಸದಲ್ಲಿ 15 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ.

ಅದೇ ರೀತಿ ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಬೀದರ್ ಸೇರಿದಂತೆ ಹಲವಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಚಿತ್ರದುರ್ಗ ಜಿಲ್ಲೆಯ ಹೊಳಲ್ಕರೆ ಸಣ್ಣ ನೀರಾವರಿ ಅಧಿಕಾರಿಯ ಮನೆ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ.ದಾವಣಗೆರೆಯ ಜಯನಗರದ ಮಹೇಶ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬೀದರ್ ಜಿಲ್ಲೆಯಲ್ಲೂ ಲೋಕಾಯುಕ್ತ ದಾಳಿ ನಡೆಸಿದ್ದು, ಕಾನ್ಸ್ ಟೇಬಲ್ ವಿಜಯ್ ಕುಮಾರ್ ಮನೆಯಲ್ಲಿ ಶೋಧ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...