alex Certify ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ: ಇಲ್ಲಿದೆ ವಿವಿಧೆಡೆ ದಾಳಿಯ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ: ಇಲ್ಲಿದೆ ವಿವಿಧೆಡೆ ದಾಳಿಯ ವಿವರ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಮತ್ತು ಅವರಿಗೆ ಸೇರಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಪತ್ನಿಯ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಯಾದಗಿರಿ ಡಿ.ಹೆಚ್.ಒ. ಡಾ. ಪ್ರಭುಲಿಂಗ ಮಾನಕರ್ ಅವರ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ನಿವಾಸದಲ್ಲಿ ಮತ್ತು ಫಾರ್ಮೌಸ್ ಮೇಲೆ ದಾಳಿ ನಡೆಸಲಾಗಿದೆ.

ಬೀದರ್ ಜಿಲ್ಲೆಯಲ್ಲಿ ಪಶು ವೈದ್ಯಕೀಯ ವಿವಿ ನೌಕರ ಸುನಿಲ್ ಕುಮಾರ್ ಮನೆ ಮತ್ತು ಕಾಂಪ್ಲೆಕ್ಸ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಬಳ್ಳಾರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಚಂದ್ರಶೇಖರ, ಅರಣ್ಯ ಇಲಾಖೆ ಅಧಿಕಾರಿ ಮಾರುತಿ ಮನೆ ಮೇಲೆ ದಾಳಿ ನಡೆಸಲಾಗಿದೆ. ಮಾರುತಿ ಅವರಿಗೆ ಸೇರಿದ ಹೊಸಪೇಟೆ, ಗಂಗಾವತಿ, ಕಂಪ್ಲಿ ನಿವಾಸಗಳ ಮೇಲೆಯೂ ದಾಳಿ ಮಾಡಲಾಗಿದೆ.

ಮೈಸೂರಿನಲ್ಲಿ ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹಾದೇವಸ್ವಾಮಿ ಮನೆ ಮೇಲೆ ದಾಳಿ ನಡೆಸಲಾಗಿದೆ. ಆದಾಯ ಮೇರಿ ಆಸ್ತಿಗಳಿಗೆ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ಬೆಂಗಳೂರಿನಲ್ಲಿ ಬೆಸ್ಕಾಂ ಜಾಗೃತ ದಳ ಅಧಿಕಾರಿ ಸುಧಾಕರ ರೆಡ್ಡಿ, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಅವರ ಮನೆ ಮೇಲೆ ದಾಳಿ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...