alex Certify ರಾಮಭಕ್ತರನ್ನು ರಾಮನೇ ಕಾಪಾಡುತ್ತಾನೆ : ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಕೆ.ಎಸ್. ಈಶ್ವರಪ್ಪ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮಭಕ್ತರನ್ನು ರಾಮನೇ ಕಾಪಾಡುತ್ತಾನೆ : ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಕೆ.ಎಸ್. ಈಶ್ವರಪ್ಪ ತಿರುಗೇಟು

ಬೆಂಗಳೂರು :  ಗೋಧ್ರಾ ದುರಂತ ರೀತಿ ಮತ್ತೊಮ್ಮೆ ಆಗಬಹುದು ಎಂಬ ಎಂಎಲ್‌ ಸಿ ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ  ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ  ಅವರು, ಗೋಧ್ರಾ ದುರಂತ ರೀತಿ ಮತ್ತೊಮ್ಮೆ ಆಗಬಹುದು ಎಂದು ಬಿ.ಕೆ. ಹರಿಪ್ರಸಾದ್‌ ಹೇಳಿಕೆ ನೀಡಿದ್ದಾರೆ.ಆದರೆ ರಾಮ ಭಕ್ತರನ್ನು ರಾಮನೇ ಕಾಪಾಡುತ್ತಾನೆ. ಇಂತಹ ಬೆದರಿಕೆಗೆಲ್ಲ ರಾಮಭಕ್ತರು ಹೆದರುವುದಿಲ್ಲ ಎಂದು ಹೇಳಿದ್ದಾರೆ.

ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ವೇಳೆ ಗೋಧ್ರಾ ರೀತಿ ಮತ್ತೊಮ್ಮೆ ಏನಾದ್ರೂ ಅಗಬಹುದು. ಮಾಹಿತಿ ಇಟ್ಟುಕೊಂಡೇ ಇದನ್ನು ಹೇಳುತ್ತಿದ್ದೇನೆ ಎಂದು ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ಕೊಡಬೇಕು. ರಾಮಮಂದಿರವನ್ನು ಧಾರ್ಮಿಕ ಗುರುಗಳು ಉದ್ಘಾಟನೆ ಮಾಡುತ್ತಿದ್ದರೆ ನಾವು ಆಹ್ವಾನ ಇಲ್ಲದೇ ಹೋಗುತ್ತಿದ್ದೇವು. ಆದರೆ ಇದು ರಾಜಕೀಯ ಕಾರ್ಯಕ್ರಮವಾಗಿದೆ. ರಾಮಂದಿರವನ್ನು ಧಾರ್ಮಿಕ ಗುರುಗಳು ಉದ್ಘಾಟನೆ ಮಾಡುತ್ತಿದ್ದರೆ ನಾವು ಹೋಗುತ್ತಿದ್ದೇವು. ಮೋದಿ ಅವರು ಉದ್ಘಾಟನೆ ಮಾಡುತ್ತಿರುವುದು ರಾಜಕೀಯ ಕಾರ್ಯಕ್ರಮ ಇದು ಧಾರ್ಮಿಕ ಕಾರ್ಯಕ್ರಮವಲ್ಲ. ಶಂಕರಾಚಾರ್ಯರು ಅಥವಾ ಹಿಂದೂ ಧರ್ಮದ ನಾಯಕರು ಉದ್ಘಾಟನೆ ಮಾಡಬೇಕಾಗಿತ್ತು ಎಂದು ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...