alex Certify ಮತ್ತೊಂದು ಮರ್ಯಾದೆಗೇಡು ಹತ್ಯೆ: ತಂದೆಯಿಂದಲೇ ಪುತ್ರಿ ಕೊಲೆ, ರೈಲಿಗೆ ತಲೆ ಕೊಟ್ಟು ಪ್ರೇಮಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ಮರ್ಯಾದೆಗೇಡು ಹತ್ಯೆ: ತಂದೆಯಿಂದಲೇ ಪುತ್ರಿ ಕೊಲೆ, ರೈಲಿಗೆ ತಲೆ ಕೊಟ್ಟು ಪ್ರೇಮಿ ಆತ್ಮಹತ್ಯೆ

ಕೋಲಾರ: ಬೇರೆ ಜಾತಿ ಹುಡುಗನ ಪ್ರೀತಿಸಿದ್ದ ಪುತ್ರಿಯನ್ನು ಆಕೆಯ ತಂದೆಯೇ ಕೊಲೆ ಮಾಡಿದ ಘಟನೆ ನಡೆದಿದ್ದು, ವಿಷಯ ತಿಳಿದ ಪ್ರಿಯಕರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಂಗಾರಪೇಟೆ ತಾಲೂಕಿನ ಬೋಡಗುರ್ಕಿ ಗ್ರಾಮದ ಯುವತಿಯನ್ನು ಆಕೆಯ ತಂದೆ ಕೃಷ್ಣಮೂರ್ತಿ ಕತ್ತು ಹಿಸುಕಿ ಕೊಲೆ ಮಾಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಯುವತಿಯ ಸಾವಿನ ವಿಷಯ ತಿಳಿದ ಅದೇ ಗ್ರಾಮದ ಯುವಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡು ವರ್ಷಗಳಿಂದ ಯುವಕ ಯುವತಿ ಪ್ರೀತಿಸಿದ್ದು, ತಂದೆ ಬುದ್ಧಿವಾದ ಹೇಳಿದ್ದರೂ ಮಗಳು ಕೇಳದೇ ಪ್ರೀತಿಸಿದ ಯುವಕನ ಮದುವೆಯಾಗಲು ಹಠ ಹಿಡಿದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದು ಕೊಲೆ ಮಾಡಿದ್ದಾನೆ. ಇದರಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...