alex Certify ಗಮನಕ್ಕೆ ಬಾರದಂತೆ ಪ್ರೇಯಸಿಯ ಖಾಸಗಿ ದೃಶ್ಯ ಸೆರೆಹಿಡಿದ, ಆಮೇಲೇನಾಯ್ತು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಕ್ಕೆ ಬಾರದಂತೆ ಪ್ರೇಯಸಿಯ ಖಾಸಗಿ ದೃಶ್ಯ ಸೆರೆಹಿಡಿದ, ಆಮೇಲೇನಾಯ್ತು ಗೊತ್ತಾ…?

ಬೆಂಗಳೂರು: ಪ್ರೀತಿಸುವುದಾಗಿ ನಂಬಿಸಿ ಯುವತಿಯ ಖಾಸಗಿ ದೃಶ್ಯಗಳನ್ನು ಸೆರೆಹಿಡಿದು ಹಣಕ್ಕಾಗಿ ಪೀಡಿಸುತ್ತಿದ್ದ ಆರೋಪಿ ಮತ್ತು ಅವನ ಮೇಲೆ ಹಲ್ಲೆ ನಡೆಸಿದವರನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಹಕಾರ ನಗರದ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಸಂತೋಷ್(23) ಬಂಧಿತ ಆರೋಪಿ. ಮತ್ತು ಅವನ ಮೇಲೆ ಹಲ್ಲೆ ಮಾಡಿದ್ದ ಎರಿಸ್ವಾಮಿ, ನಂಜುಂಡಸ್ವಾಮಿ ಹಾಗೂ ಆಕಾಶ್ ಎಂಬುವರನ್ನು ಕೂಡ ಬಂಧಿಸಲಾಗಿದೆ.

ಸಂತೋಷ್ 24 ವರ್ಷದ ಯುವತಿಯನ್ನು ಪರಿಚಯಿಸಿಕೊಂಡಿದ್ದು, ಆಕೆಯನ್ನು ಪ್ರೀತಿಸುವುದಾಗಿ ಹೇಳಿದ್ದ. ಯುವತಿ ಕೂಡ ಪ್ರೀತಿಗೆ ಒಪ್ಪಿಕೊಂಡಿದ್ದಳು. ನಂತರದಲ್ಲಿ ಆಕೆಯ ಗಮನಕ್ಕೆ ಬಾರದಂತೆ ಸಂತೋಷ್ ಆಕೆಯೊಂದಿಗೆ ಕಳೆದ ಖಾಸಗಿ ಕ್ಷಣದ ದೃಶ್ಯಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ. ಯುವತಿಗೆ ವಿಡಿಯೋ ಕಳುಹಿಸಿ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದು, ಹಣ ಕೊಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಇದರಿಂದ ಆತಂಕಗೊಂಡ ಯುವತಿ ಕೇಳಿದಾಗಲೆಲ್ಲ ಹಣ ಕೊಟ್ಟಿದ್ದು, ಪದೇ ಪದೇ ಹಣಕ್ಕೆ ಬೇಡಿಕೆ ಇಟ್ಟಿದ್ದ ಸಂತೋಷ್ ಬಗ್ಗೆ ತನ್ನ ಸ್ನೇಹಿತರಾಗಿದ್ದ ನಂಜುಂಡಸ್ವಾಮಿ, ಎರಿಸ್ವಾಮಿ ಮತ್ತು ಆಕಾಶ್ ಅವರಿಗೆ ತಿಳಿಸಿದ್ದಾಳೆ.

ಯುವತಿಗೆ ಸಹಾಯ ಮಾಡುವುದಾಗಿ ಹೇಳಿದ್ದ ಈ ಮೂವರು ನವೆಂಬರ್ 16 ರಂದು ರಾತ್ರಿ ಸಂತೋಷ್ ರೂಮ್ ಗೆ ನುಗ್ಗಿ ಪೇಪರ್ ಸ್ಪ್ರೇ ಮಾಡಿ, ಹಲ್ಲೆ ನಡೆಸಿ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಸಂತೋಷ್ ಕೊಡಿಗೆಹಳ್ಳಿ ಠಾಣೆಗೆ ದೂರು ನೀಡಿದ್ದು, ಆತನ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ. ಇನ್ನು ಯುವತಿ ನೀಡಿದ ದೂರಿನ ಆಧಾರದ ಮೇಲೆ ಸಂತೋಷ್ ನನ್ನು ಕೂಡ ಪೊಲೀಸರು ಬಂಧಿಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...