alex Certify ಶಿವಮೊಗ್ಗ: ಕಾಡಿಗೆ ವಿದ್ಯಾರ್ಥಿನಿ ಕರೆದೊಯ್ದು ಯುವಕನಿಂದ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ: ಕಾಡಿಗೆ ವಿದ್ಯಾರ್ಥಿನಿ ಕರೆದೊಯ್ದು ಯುವಕನಿಂದ ಘೋರ ಕೃತ್ಯ

ಶಿವಮೊಗ್ಗ: ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿಯನ್ನು ಯುವಕ ಕೊಲೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಶಿವಮೊಗ್ಗದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು,  ತುಂಗಾಗರ ಠಾಣೆಗೆ ದೂರು ನೀಡಲಾಗಿತ್ತು. ಆಕೆಯನ್ನು ಹೊಸನಗರ ತಾಲೂಕು ತಳಲೆ ಗ್ರಾಮದ ಶಿವಮೂರ್ತಿ(22) ಎಂಬಾತ ನೆರಲಿಗೆ ಕಾಡಿಗೆ ಕರೆದುಕೊಂಡು ಹೋಗಿ ಪ್ರೀತಿಸುವಂತೆ ಬಲವಂತ ಮಾಡಿದ್ದಾನೆ. ವಿದ್ಯಾರ್ಥಿನಿ ಪ್ರೀತಿಸಲು ನಿರಾಕರಿಸಿದಾಗ ಚೂಡಿದಾರ್ ವೇಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ. ನಂತರ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿ ಪ್ರೀತಿಸಲು ನಿರಾಕರಿಸಿದ್ದರಿಂದ ಯುವಕ ಇಂತಹ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ರಿಪ್ಪನ್ ಪೇಟೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...