alex Certify ಕಾಮದ ಮದದಲ್ಲಿ ಪತ್ನಿಯಿಂದಲೇ ಘೋರ ಕೃತ್ಯ: ತನಿಖೆಯಲ್ಲಿ ಬಯಲಾಯ್ತು ರಹಸ್ಯ; ಪ್ರಿಯಕರನೊಂದಿಗೆ ಸೇರಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮದ ಮದದಲ್ಲಿ ಪತ್ನಿಯಿಂದಲೇ ಘೋರ ಕೃತ್ಯ: ತನಿಖೆಯಲ್ಲಿ ಬಯಲಾಯ್ತು ರಹಸ್ಯ; ಪ್ರಿಯಕರನೊಂದಿಗೆ ಸೇರಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಕೊಲೆ

ಹಾಸನ: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತನಿಖೆ ಕೈಗೊಂಡ ಪೊಲೀಸರು ಕೊಲೆ ರಹಸ್ಯ ಬಯಲಿಗೆಳೆದು ಆರೋಪಿಗಳನ್ನು ಬಂಧಿಸಿದ್ದಾರೆ.

ಸಕಲೇಶಪುರ ತಾಲ್ಲೂಕು ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮರಡಿ ಕರೆ ಗ್ರಾಮದ ಐಗೂರು ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿರುವುದಾಗಿ ಬಿಂಬಿಸಿದ್ದು, ಪೊಲೀಸರ ತನಿಖೆಯಲ್ಲಿ ಕೊಲೆ ರಹಸ್ಯ ಬೆಳಕಿಗೆ ಬಂದಿದೆ.

ಸಂತೋಷ್ ಮೃತಪಟ್ಟ ವ್ಯಕ್ತಿ. ಬೈಕ್ ಅಪಘಾತದಲ್ಲಿ ಸಂತೋಷ್ ಮೃತಪಟ್ಟಿದ್ದಾನೆ. ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎಂದು ಆತನ ಪತ್ನಿ ಶೃತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಮರಣೋತ್ತರ ಪರೀಕ್ಷೆ ನಂತರ ಮೃತ ದೇಹದ ಮೇಲೆ ಗಾಯದ ಗುರುತುಗಳು ಇಲ್ಲದ ಬಗ್ಗೆ ಸಂಶಯಗೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಶ್ರುತಿಯನ್ನು ವಿಚಾರಣೆಗೆ ಒಳಪಡಿಸಿದಾಗ ಕೊಡಗು ಜಿಲ್ಲೆ ತ್ಯಾಗರಾಜ ಕಾಲೋನಿಯ ಚಂದ್ರಶೇಖರ್ ಜೊತೆಗೆ ಅಕ್ರಮ ಸಂಬಂಧ ಇರುವುದು ಗೊತ್ತಾಗಿದೆ. ತಮ್ಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂಬ ಕಾರಣಕ್ಕೆ ಸಂತೋಷ್ ನನ್ನು ಕೊಲೆ ಮಾಡಿ ಅಪಘಾತ ಎನ್ನುವಂತೆ ಬಿಂಬಿಸಿದ್ದಾರೆ. ಸಕಲೇಶಪುರ ಪೊಲೀಸ್ ಉಪ ಅಧೀಕ್ಷಕ ಅನಿಲ್ ಕುಮಾರ್, ಸಿಪಿಐ ಚೈತನ್ಯ, ಪಿಎಸ್ಐ ಮಂಜುನಾಥ ಅವರ ನೇತೃತ್ವದ ತಂಡ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಶ್ರೀನಿವಾಸಗೌಡ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...