alex Certify ಚರ್ಮ ಗಂಟು ರೋಗದಿಂದ ಹಸು ಮೃತಪಟ್ರೆ 50 ಸಾವಿರ ರೂ. ಪರಿಹಾರ ನೀಡಲು ಸರ್ಕಾರಕ್ಕೆ HDK ಪತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚರ್ಮ ಗಂಟು ರೋಗದಿಂದ ಹಸು ಮೃತಪಟ್ರೆ 50 ಸಾವಿರ ರೂ. ಪರಿಹಾರ ನೀಡಲು ಸರ್ಕಾರಕ್ಕೆ HDK ಪತ್ರ

ಬೆಂಗಳೂರು: ಚರ್ಮ ಗಂಟು ರೋಗದಿಂದ(Lumpy Skin Disease) ಹಸುಗಳು ಸಾಯುತ್ತಿದ್ದು, ಸರ್ಕಾರ ಹಸುಗಳ ಸಾವಿನ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ರೋಗದಿಂದ ಹಸು ಮೃತಪಟ್ಟರೆ 20,000 ರೂ. ಕೊಡುತ್ತೇವೆ ಎಂದು ಹೇಳಿದ್ದರು. ಆದರೆ, ಮೃತಪಟ್ಟ ಹಸುಗಳ ಮರಣೋತ್ತರ ಪರೀಕ್ಷೆಗೆ ವೈದ್ಯರೇ ಇಲ್ಲ. ಇನ್ನು ರೋಗವನ್ನು ಹೇಗೆ ಪತ್ತೆ ಹಚ್ಚುತ್ತೀರಾ ಎಂದು ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

ರೋಗ ಪತ್ತೆ ಮಾಡಿ ಲಸಿಕೆ ಕೊಡಬೇಕು. 50,000 ರೂ. ಪರಿಹಾರ ನೀಡಿ ರೈತರಿಗೆ ನೆರವಾಗಬೇಕು ಎಂದು ಅವರು ಆಗ್ರಹಿಸಿದ್ದು, ಈ ವಿಚಾರವಾಗಿ ನಾನು ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...