alex Certify ಅಧಿಕೃತ ಅಭ್ಯರ್ಥಿಗಳ ವಿರುದ್ಧ ಕೆಲಸ: ವಿಜಯೇಂದ್ರ ಆಪ್ತ ರುದ್ರೇಶ್ ಸೇರಿ ಹಲವರಿಗೆ ಬಿಜೆಪಿ ಶಿಸ್ತು ಸಮಿತಿ ನೋಟಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಧಿಕೃತ ಅಭ್ಯರ್ಥಿಗಳ ವಿರುದ್ಧ ಕೆಲಸ: ವಿಜಯೇಂದ್ರ ಆಪ್ತ ರುದ್ರೇಶ್ ಸೇರಿ ಹಲವರಿಗೆ ಬಿಜೆಪಿ ಶಿಸ್ತು ಸಮಿತಿ ನೋಟಿಸ್

ಬೆಂಗಳೂರು: ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಆಪ್ತ ರುದ್ರೇಶ್ ಸೇರಿದಂತೆ 15 ಜನರಿಗೆ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿದ ಆರೋಪದ ಮೇಲೆ ಎಂ. ರುದ್ರೇಶ್ ಸೇರಿದಂತೆ ರಾಜ್ಯದ 15ಕ್ಕೂ ಹೆಚ್ಚು ಮುಖಂಡರಿಗೆ ನೋಟಿಸ್ ನೀಡಲಾಗಿದೆ.

ಮಾಜಿ ಸಚಿವ ವಿ. ಸೋಮಣ್ಣ ದೂರು ನೀಡಿದ ಹಿನ್ನೆಲೆಯಲ್ಲಿ ಬಿ.ವೈ. ವಿಜಯೇಂದ್ರ ಆಪ್ತ ರುದ್ರೇಶ್ ಗೆ ನೋಟಿಸ್ ನೀಡಲಾಗಿದೆ ಎಂದು ಹೇಳಲಾಗಿದೆ. ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ವಿ. ಸೋಮಣ್ಣ ವಿರುದ್ಧ ರುದ್ರೇಶ್ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ ಕೇಳಿ ಬಂದಿದ್ದು, ಸೋಮಣ್ಣ ಪಕ್ಷದ ನಾಯಕರಿಗೆ ದೂರು ನೀಡಿದ್ದರು. ಚಾಮರಾಜನಗರ ಬಿಜೆಪಿ ಜಿಲ್ಲಾ ಘಟಕದಿಂದಲೂ ಈ ಬಗ್ಗೆ ಮಾಹಿತಿ ಪಡೆದು ರುದ್ರೇಶ್ ಅವರಿಗೆ ಶಿಸ್ತು ಸಮಿತಿ ನೋಟಿಸ್ ನೀಡಿ ವಾರದೊಳಗೆ ಉತ್ತರ ನೀಡುವಂತೆ ಸೂಚಿಸಿದೆ. ಆದರೆ, ತಮಗೆ ಯಾವುದೇ ನೋಟಿಸ್ ಬಂದಿಲ್ಲವೆಂದು ರುದ್ರೇಶ್ ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tajemství šťavnatého mletého masa: univerzální ingredience z každé Výroba jahodových tvarohových koláčů Stárnutí: Začátek a zpomalení procesu - Dva haléře – jak krmit pokojové fialky, aby Co se smaží Tipy na vaření kukuřice: jak ji změknout a zjemnit Nepříjemné zeleniny, které byste měli vyhnout, pokud chcete zhubnout Jak rozpoznat přírodní máslo: 3 hlavní Správné skladování: Tyto Jak pomocí mince orchidej rozkvete: trik odhalen online