alex Certify ತಡರಾತ್ರಿ ವಯಸ್ಸಿಗೆ ಬಂದ ಹೆಣ್ಣುಮಕ್ಕಳ ನಗ್ನಗೊಳಿಸಿ ಬರ್ಬರ ಹತ್ಯೆ ಮಾಡಿದ್ದ ಪೋಷಕರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ವಯಸ್ಸಿಗೆ ಬಂದ ಹೆಣ್ಣುಮಕ್ಕಳ ನಗ್ನಗೊಳಿಸಿ ಬರ್ಬರ ಹತ್ಯೆ ಮಾಡಿದ್ದ ಪೋಷಕರು ಅರೆಸ್ಟ್

ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಪೋಷಕರು ಮಕ್ಕಳನ್ನು ಬಲಿಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕ್ರಮಕೈಗೊಂಡು ಪೋಷಕರನ್ನು ಬಂಧಿಸಿದ್ದಾರೆ.

ತಂದೆ ಪುರುಷೋತ್ತಮ ನಾಯ್ಡು ಮತ್ತು ತಾಯಿ ಪದ್ಮಜಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುವುದು. ದಂಪತಿಗೆ ಮದನಪಲ್ಲಿ ಸರ್ಕಾರಿ ಆಸ್ಪತ್ರೆಯ ಮಾನಸಿಕ ತಜ್ಞೆ ಡಾ. ರಾಧಿಕಾ ಅವರಿಂದ ಕೌನ್ಸಿಲಿಂಗ್ ನಡೆಸಲಾಗಿದೆ.

ನಿನ್ನೆ ಈ ದಂಪತಿ ಮೌಢ್ಯದ ಹೆಸರಲ್ಲಿ ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನು ಬಲಿ ಕೊಟ್ಟಿದ್ದರು. 22 ಮತ್ತು 27 ವರ್ಷದ ಹೆಣ್ಣು ಮಕ್ಕಳನ್ನು ಬೆತ್ತಲೆಗೊಳಿಸಿ ಪೂಜೆ ಮಾಡಿ ಡಂಬಲ್ಸ್ ನಿಂದ ಹೊಡೆದು ಕೊಲೆ ಮಾಡಿದ್ದರು. ಮಕ್ಕಳನ್ನು ಹತ್ಯೆ ಮಾಡಿ ಅವರು ಮತ್ತೆ ಹುಟ್ಟಿ ಬರುತ್ತಾರೆ ಎಂದು ಭಾವಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಪುರುಷೋತ್ತಮ ನಾಯ್ಡು ಮತ್ತು ಪದ್ಮಜಾರನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...