alex Certify ಉಪನ್ಯಾಸಕರಿಗೆ ಗುಡ್ ನ್ಯೂಸ್: ಕಾಲ ಮಿತಿ ಬಡ್ತಿ ನೀಡಲು ಸರ್ಕಾರ ಸಮ್ಮತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಪನ್ಯಾಸಕರಿಗೆ ಗುಡ್ ನ್ಯೂಸ್: ಕಾಲ ಮಿತಿ ಬಡ್ತಿ ನೀಡಲು ಸರ್ಕಾರ ಸಮ್ಮತಿ

ಬೆಂಗಳೂರು: ಉಪನ್ಯಾಸಕರಿಗೆ ಕಾಲಮಿತಿ ಬಡ್ತಿ ನೀಡಲು ರಾಜ್ಯ ಸರ್ಕಾರ ಸಮ್ಮತಿಸಿದೆ. ಪ್ರೌಢಶಾಲೆಯಿಂದ ಬಡ್ತಿ ಪಡೆದು ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಿಗೆ ಕಾರ್ಯನಿರ್ವಹಿಸುತ್ತಿರುವವರಿಗೆ 10, 15, 20, 25 ವರ್ಷಗಳ ಕಾಲ ಮಿತಿ ಬಡ್ತಿ ನೀಡಲು ಸರ್ಕಾರ ಒಪ್ಪಿದೆ.

ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಮತ್ತು ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಪ್ರತಿನಿಧಿಗಳೊಂದಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಭೆ ನಡೆಸಿ ಚರ್ಚಿಸಿದ್ದಾರೆ.

ಕಾಲ ಮಿತಿ ಬಡ್ತಿ ಸೇರಿ ಉಪನ್ಯಾಸಕರ ಹಲವು ಬೇಡಿಕೆ ಈಡೇರಿಸಲು ಸಚಿವರು ಒಪ್ಪಿದ್ದಾರೆ. ಪ್ರೌಢಶಾಲೆಯಿಂದ ಪದೋನ್ನತಿ ಪಡೆದು ವನ್ನು ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ 10 ರಿಂದ 25 ವರ್ಷಗಳ ಕಾಲಮಿತಿ ಬಡ್ತಿ ಮಂಜೂರು ಮಾಡಲಾಗುತ್ತದೆ. 2008ರ ಆಗಸ್ಟ್ 1 ರಿಂದ ನೇಮಕವಾದ ಉಪನ್ಯಾಸಕರಿಗೆ ಒಂದು ವಿಶೇಷ ವೇತನ ಬಡ್ತಿ ಮಂಜೂರು ಮಾಡಲಿದ್ದು, ಉಳಿದ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಪರಿಶೀಲಿಸುವುದಾಗಿ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...