alex Certify ಗುಂಡಿಕ್ಕಿ ಬಿಜೆಪಿ ನಾಯಕ, ಸಚಿವ ಕೈಲಾಶ್ ವಿಜಯವರ್ಗಿಯಾ ಸಹಾಯಕನ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಂಡಿಕ್ಕಿ ಬಿಜೆಪಿ ನಾಯಕ, ಸಚಿವ ಕೈಲಾಶ್ ವಿಜಯವರ್ಗಿಯಾ ಸಹಾಯಕನ ಹತ್ಯೆ

ಇಂದೋರ್: ಸ್ಥಳೀಯ ಬಿಜೆಪಿ ಮುಖಂಡ ಮತ್ತು ಮಧ್ಯಪ್ರದೇಶ ಸಚಿವ ಕೈಲಾಶ್ ವಿಜಯವರ್ಗಿಯಾ ಅವರ ಸಹಾಯಕ ಮೋನು ಕಲ್ಯಾಣೆ ಅವರನ್ನು ಇಂದೋರ್‌ನಲ್ಲಿ ಭಾನುವಾರ ಮುಂಜಾನೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜೆಪಿಯ ಯುವ ಮೋರ್ಚಾದ ನಗರ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಕಲ್ಯಾಣೆ, ವಿಜಯವರ್ಗಿಯಾ ಮತ್ತು ಅವರ ಮಗ ಮಾಜಿ ಶಾಸಕ ಆಕಾಶ್ ವಿಜಯವರ್ಗಿಯಾ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದರು.

ಪ್ರಾಥಮಿಕ ತನಿಖೆಯ ಪ್ರಕಾರ, ಹಳೆಯ ದ್ವೇಷದಿಂದ ಪ್ರೇರೇಪಿಸಲ್ಪಟ್ಟ ಪಿಯೂಷ್ ಮತ್ತು ಅರ್ಜುನ್ ಎಂಬ ಇಬ್ಬರು ವ್ಯಕ್ತಿಗಳು ಆತನ ಮೇಲೆ ಗುಂಡು ಹಾರಿಸಿದ್ದಾರೆ. ಸದ್ಯ ಆರೋಪಿಗಳು ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ನಡೆಯುತ್ತಿದೆ.

ನಗರದ ಚಿಮನ್‌ ಬಾಗ್‌ ನಲ್ಲಿ ಕೇಸರಿ ವಾಹನ ರ್ಯಾಲಿಗಾಗಿ ಬ್ಯಾನರ್ ಮತ್ತು ಪೋಸ್ಟರ್‌ಗಳನ್ನು ಹಾಕುತ್ತಿದ್ದಾಗ ಕಲ್ಯಾಣ್ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಎದೆಗೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಕಲ್ಯಾಣ್ ಅವರನ್ನು ಅವರ ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...