
ಮಹಾಕುಂಭಕ್ಕೆ ಆಗಮಿಸಿದ್ದ ಭಕ್ತರಿಗೆ ಆಹಾರವನ್ನು ತಯಾರಿಸಲಾಗುತ್ತಿತ್ತು. ಈ ವೇಳೆ ಪೊಲೀಸ್ ಅಧಿಕಾರಿಯೊಬ್ಬ ಆಹಾರದ ಪಾತ್ರೆಯಲ್ಲಿ ಮಣ್ಣು ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಆತನ ವಿರುದ್ಧ ದೂರು ದಾಖಲಿಸಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಸಾಮಾಜಿಕ ಮಾಧ್ಯಮ ಬಳಕೆದಾರರು ವಿಡಿಯೋವನ್ನು X (Twitter) ನಲ್ಲಿ ಹಂಚಿಕೊಂಡಿದ್ದಾರೆ.
ಯಾದವ್ ಪೋಸ್ಟ್ನಲ್ಲಿ, “ಮಹಾಕುಂಭದಲ್ಲಿ ಸಿಲುಕಿರುವವರಿಗೆ ಆಹಾರ ಮತ್ತು ನೀರನ್ನು ಒದಗಿಸಲು ವ್ಯವಸ್ಥೆ ಮಾಡುತ್ತಿರುವವರ ಉತ್ತಮ ಪ್ರಯತ್ನಗಳನ್ನು ರಾಜಕೀಯ ದ್ವೇಷದಿಂದಾಗಿ ಹಾಳುಮಾಡಲಾಗುತ್ತಿದೆ ಎಂಬುದು ದುರದೃಷ್ಟಕರ. ಸಾರ್ವಜನಿಕರು ಗಮನಿಸಬೇಕು” ಎಂದು ಬರೆದಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಪಿ ಗಂಗಾ ನಗರದ ಅಧಿಕೃತ ಖಾತೆ, “ವಿಷಯವನ್ನು ಗಮನಕ್ಕೆ ತೆಗೆದುಕೊಂಡು, ಡೆಪ್ಯೂಟಿ ಕಮಿಷನರ್ ಆಫ್ ಪೊಲೀಸ್ (ಗಂಗಾ ನಗರ) ಎಸಿಪಿ ಸೋರಾಂ ವರದಿಯ ಆಧಾರದ ಮೇಲೆ ಸೋರಾಂ ಎಸ್ಎಚ್ಒವನ್ನು ಅಮಾನತುಗೊಳಿಸಿದ್ದಾರೆ. ಇಲಾಖಾ ಕ್ರಮಗಳು ಜಾರಿಯಲ್ಲಿವೆ.” ಎಂದು ಹೇಳಿದೆ.
ಪ್ರಯಾಗ್ರಾಜ್ನ ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 30 ಜನರು ಸಾವನ್ನಪ್ಪಿ 60 ಮಂದಿ ಗಾಯಗೊಂಡ ಒಂದು ದಿನದ ನಂತರ ಈ ಘಟನೆ ನಡೆದಿದೆ.
ये दुर्भाग्यपूर्ण है कि जो लोग महाकुंभ में फँसे लोगों के लिए भोजन-पानी की व्यवस्था कर रहे है उनके सद्प्रयासों के ऊपर राजनीतिक विद्वेषवश मिट्टी डाल दी जा रही है।
जनता संज्ञान ले! pic.twitter.com/LTwwKbBwO5
— Akhilesh Yadav (@yadavakhilesh) January 30, 2025