alex Certify ಕನ್ನಡ ರಾಜ್ಯೋತ್ಸವದಂದು ಕರಾಳ ದಿನ ಆಚರಣೆಗೆ ಮುಂದಾದ MES | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡ ರಾಜ್ಯೋತ್ಸವದಂದು ಕರಾಳ ದಿನ ಆಚರಣೆಗೆ ಮುಂದಾದ MES

ಬೆಳಗಾವಿ: ನವೆಂಬರ್ 1 ಕನ್ನಡ ರಾಜ್ಯೋತ್ಸವ. ಈ ಸಂದರ್ಭದಲ್ಲಿ ಎಂಇಎಸ್ ಮತ್ತೆ ಗಡಿ ವಿಚಾರವಾಗಿ ಕ್ಯಾತೆ ತೆಗೆಯಲು ಮುದಾಗಿದೆ. ಕರಾಳ ದಿನ ಆಚರಣೆಗೆ ಕರೆ ಕೊಟ್ಟಿದೆ.

ಎಂಇಎಸ್ ನ ಠಾಕ್ರೆ ಬಣದ ಮುಖಂಡರು ಮಹಾರಾಷ್ಟ್ರದಲ್ಲಿ ಸಭೆ ನಡೆಸಿದ್ದು, ಸಭೆಯಲ್ಲಿ ನವೆಂಬರ್ 1ರಂದು ಕರಾಳ ದಿನ ಆಚರಣೆ ನಡೆಸಲು ನಿರ್ಧರಿಸಲಾಗಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿಯೂ ಎಂಇಎಸ್ ಕರಾಳ ದಿನ ಆಚರಣೆಗೆ ಕರೆ ನೀಡಿದೆ.

ಅಕ್ಟೋಬರ್ 31ರಂದು ಶಿವಸೇನೆಯ ಪದಾಧಿಕಾರಿಗಳೆಲ್ಲರೂ ಸೇರುತ್ತಿದ್ದು, ಬೆಳಗಾವಿಗೆ ಆಗಮಿಸುವುದಾಗಿ ಶಿವಸೇನೆ ಕೊಲ್ಲಾಪುರ ವಿಭಾಗದ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ತಿಳಿಸಿದ್ದಾರೆ.

ಬೆಳಗಾವಿ, ಬೀದರ್, ಬಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಿಸಬೇಕು ಈ ನಿಟ್ಟಿನಲ್ಲಿ ಹೋರಾಟ ಹಮ್ಮಿಕೊಂಡಿದ್ದು, ಒಂದು ವೇಳೆ ಚೆಕ್ ಪೋಸ್ಟ್ ಗಳಲ್ಲಿ ನಮ್ಮನ್ನು ತಡೆದರೆ ಶಿನೋಳಿ ಮಾರ್ಗವಾಗಿ ಬೆಳಗಾವಿಗೆ ಬರುವುದಾಗಿ ಎಚ್ಚರಿಕೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...