alex Certify ಗಡಿ ವಿವಾದದ ಬಳಿಕ ಮಹದಾಯಿ ವಿಚಾರದಲ್ಲಿ ಮೂಗು ತೂರಿಸಿದ ಮಹಾರಾಷ್ಟ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಡಿ ವಿವಾದದ ಬಳಿಕ ಮಹದಾಯಿ ವಿಚಾರದಲ್ಲಿ ಮೂಗು ತೂರಿಸಿದ ಮಹಾರಾಷ್ಟ್ರ

ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಗೋವಾ ಮತ್ತೆ ತಗಾದೆ ತೆಗೆದಿದೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಬೆಂಬಲ ನೀಡಿದ್ದಾರೆ.

ಗಡಿ ವಿವಾದ ಬಳಿಕ ಮಹದಾಯಿ ವಿಚಾರದಲ್ಲಿ ಮಹಾರಾಷ್ಟ್ರ ಮೂಗು ತೂರಿಸಿದೆ. ಮಹಾರಾಷ್ಟ್ರದ ತಿಲಾರಿ ಅಣೆಕಟ್ಟು ಯೋಜನೆ ವಿಚಾರವಾಗಿ ನಿನ್ನೆ ಮುಂಬೈನಲ್ಲಿ ಅಂತರರಾಜ್ಯ ನಿಯಂತ್ರಣ ಮಂಡಳಿ ಸಭೆ ನಡೆಸಲಾಗಿದೆ.

ಸಭೆಯಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ, ಡಿಸಿಎಂ ದೇವೇಂದ್ರ ಫಡ್ನವಿಸ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಸಚಿವ ಸುಭಾಷ್ ಭಾಗವಹಿಸಿದ್ದು, ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯಲ್ಲಿರುವ ಕಿಲಾರಿ ಅಣೆಕಟ್ಟು ಯೋಜನೆಯ ನೆಪದಲ್ಲಿ ಮಹಾದಾಯಿ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಮಹದಾಯಿ ಹೋರಾಟದಲ್ಲಿ ಶಿಂದೆ ಖ್ಯಾತೆ ತೆಗೆದಿದ್ದಾರೆ. ಮಹದಾಯಿ ಹೋರಾಟದಲ್ಲಿ ಗೋವಾ ಜೊತೆ ಇರುತ್ತೇವೆ ಎಂದು ಹೇಳಿದ್ದಾರೆ. ಈ ಮೂಲಕ ಗಡಿ ವಿವಾದದ ಬಳಿಕ ಮಹಾರಾಷ್ಟ್ರ ಮಹದಾಯಿ ವಿಚಾರದಲ್ಲಿ ಮೂಗು ತೂರಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...