alex Certify ಮಹಾರಾಷ್ಟ್ರದಲ್ಲಿ ಅ.7 ರಿಂದ ತೆರೆಯಲಿದೆ ಎಲ್ಲ ಧಾರ್ಮಿಕ ಕೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾರಾಷ್ಟ್ರದಲ್ಲಿ ಅ.7 ರಿಂದ ತೆರೆಯಲಿದೆ ಎಲ್ಲ ಧಾರ್ಮಿಕ ಕೇಂದ್ರ

ಕೊರೊನಾ ಎರಡನೇ ಅಲೆ ನಂತ್ರ ಮಹಾರಾಷ್ಟ್ರ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ದೀರ್ಘ ಕಾಲದಿಂದ ಮುಚ್ಚಲ್ಪಟ್ಟಿದ ಧಾರ್ಮಿಕ ಸ್ಥಳಗಳನ್ನು ಅಕ್ಟೋಬರ್ 7 ರಿಂದ ತೆರೆಯಲು ಒಪ್ಪಿಗೆ ನೀಡಿದೆ. ಹಬ್ಬಗಳು ಆರಂಭವಾಗುತ್ತಿದ್ದು, ನವರಾತ್ರಿ ಮೊದಲು ಎಲ್ಲ ದೇವಾಲಯಗಳು ಮತ್ತು ಧಾರ್ಮಿಕ ಕೇಂದ್ರಗಳ ಬಾಗಿಲು ತೆರೆಯಲಿದೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ರಾಜ್ಯದ ಎಲ್ಲಾ ಧಾರ್ಮಿಕ ಸ್ಥಳಗಳು ಅಕ್ಟೋಬರ್ 7 ರಿಂದ ತೆರೆಯಲ್ಪಡುತ್ತವೆ. ಮಹಾರಾಷ್ಟ್ರ ಸರ್ಕಾರ, ಮೂರನೇ ಅಲೆಗೆ ಸಿದ್ಧವಾಗಿದೆ ಎಂದು ಹೇಳಿದ್ದಾರೆ. ಕೋವಿಡ್ -19 ಪ್ರಕರಣಗಳು ದಿನೇ ದಿನೇ ಕಡಿಮೆಯಾಗುತ್ತಿದ್ದರೂ, ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕೆಂದು ಸಿಎಂ ಮನವಿ ಮಾಡಿದ್ದಾರೆ. ಕೊರೊನಾ ಪ್ರೋಟೋಕಾಲ್ ಅನುಸರಿಸುವುದು ಕಡ್ಡಾಯವೆಂದು ಅವರು ಹೇಳಿದ್ದಾರೆ. ದೇವಾಲಯಗಳಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕೆಂದು ಅವರು ಸೂಚನೆ ನೀಡಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಅಕ್ಟೋಬರ್ 4 ರಿಂದ ಶಾಲೆಗಳನ್ನು ತೆರೆಯಲು ಅನುಮತಿ ನೀಡಿದ್ದಾರೆ. ಷರತ್ತುಬದ್ಧವಾಗಿ ಶಾಲೆಗಳನ್ನು ತೆರೆಯಬೇಕೆಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರದ ಗ್ರಾಮೀಣ ಪ್ರದೇಶಗಳಲ್ಲಿ 5-12 ತರಗತಿಗೆ, ಪಟ್ಟಣಗಳಲ್ಲಿ ಮತ್ತು ನಗರ ಪ್ರದೇಶಗಳಲ್ಲಿ 8-12 ತರಗತಿ ಶಾಲೆಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಶಾಲೆಗಳನ್ನು ಕಳೆದ ಒಂದೂವರೆ ವರ್ಷದಿಂದ ಮುಚ್ಚಲ್ಪಟ್ಟಿವೆ. ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ನಡೆಯುತ್ತಿದೆ. ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡ್ಡಾಯವಾಗಿರುವುದಿಲ್ಲ. ಮಕ್ಕಳನ್ನು ಶಾಲೆಗೆ ಕಳುಹಿಸುವುದು, ಪೋಷಕರಿಗೆ ಬಿಟ್ಟಿದ್ದು ಎಂದು ಸರ್ಕಾರ ಹೇಳಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...