alex Certify ಏಕನಾಥ್ ಶಿಂಧೆ ‘ಸಿಎಂ’ ಆದ ರಹಸ್ಯ ಬಹಿರಂಗಪಡಿಸಿದ ಡಿಸಿಎಂ ದೇವೇಂದ್ರ ಫಡ್ನವೀಸ್: ನಾನೇ ಪ್ರಸ್ತಾಪಿಸಿದ್ದೆ , ನಂದೇ ಐಡಿಯಾ ಎಂದು ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏಕನಾಥ್ ಶಿಂಧೆ ‘ಸಿಎಂ’ ಆದ ರಹಸ್ಯ ಬಹಿರಂಗಪಡಿಸಿದ ಡಿಸಿಎಂ ದೇವೇಂದ್ರ ಫಡ್ನವೀಸ್: ನಾನೇ ಪ್ರಸ್ತಾಪಿಸಿದ್ದೆ , ನಂದೇ ಐಡಿಯಾ ಎಂದು ಹೇಳಿಕೆ

ಮುಂಬೈ: ಏಕನಾಥ್ ಶಿಂಧೆ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಮಾಡಿದ್ದು ನಾನೇ ಎಂದು ಡಿಸಿಎಂ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಏಕನಾಥ್ ಶಿಂಧೆ ಅವರನ್ನು ಮಹಾರಾಷ್ಟ್ರ ಸಿಎಂ ಮಾಡಲು ಕೇಂದ್ರ ಬಿಜೆಪಿ ನಾಯಕತ್ವಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೆ. ಪಕ್ಷದ ವರಿಷ್ಠರ ಆದೇಶದ ಮೇರೆಗೆ ನಾನು ಉಪ ಮುಖ್ಯಮಂತ್ರಿ ಸ್ಥಾನ ಒಪ್ಪಿಕೊಂಡೆ ಎಂದು ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಹೊಸ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ನೇಮಕಗೊಂಡ ನಂತರ ಅವರ ತವರು ನಗರಕ್ಕೆ ಇಂದು ಮೊದಲ ಭೇಟಿ ನೀಡಿದ್ದು, ಶಿಂಧೆ ಅವರನ್ನು ಸಿಎಂ ಮಾಡುವುದು ನನ್ನ ಪ್ರಸ್ತಾಪವಾಗಿತ್ತು. ಶಿಂಧೆ ಯಶಸ್ವಿ ಸಿಎಂ ಆಗುವಂತೆ ನೋಡಿಕೊಳ್ಳುವುದು ನನ್ನ ಜವಾಬ್ದಾರಿ ಎಂದು ತಿಳಿಸಿದ್ದಾರೆ.

ನಾನು ಮನವಿ ಮಾಡಿದ್ದರೆ ಸಿಎಂ ಆಗಬಹುದಿತ್ತು. ಸಿದ್ದಾಂತಕ್ಕಾಗಿ ಶಿವಸೇನೆಯವರನ್ನು ಸಿಎಂ ಮಾಡಿದ್ದೇವೆ. ಶಿಂಧೆ ಅವರನ್ನು ಸಿಎಂ ಮಾಡಬೇಕೆಂಬುದು ನನ್ನ ಪ್ರಸ್ತಾಪವಾಗಿತ್ತು. ಆದರೆ, ನಾನು ಸರ್ಕಾರದಿಂದ ಹೊರಗುಳಿದರೆ ಆಡಳಿತ ನಡೆಸಲು ಸರಿಯಾಗಲ್ಲ ಎಂದು ಪಕ್ಷದ ಹಿರಿಯ ನಾಯಕರು ಪಟ್ಟು ಹಿಡಿದಿದ್ದರಿಂದ ಅವರ ಆದೇಶದ ಮೇರೆಗೆ ನಾನು ಡಿಸಿಎಂ ಆಗಲು ಒಪ್ಪಿಕೊಂಡೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...