alex Certify ಬೆಚ್ಚಿಬೀಳಿಸುವಂತಿದೆ ಕಾಲೇಜು ಆವರಣದಲ್ಲಿ ನಡೆದಿರುವ ಘಟನೆ: ಪರೀಕ್ಷೆ ಬರೆದು ಬರುವಾಗಲೇ ವಿದ್ಯಾರ್ಥಿನಿಯ ಕುತ್ತಿಗೆ ಇರಿದ ಸಹಪಾಠಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಚ್ಚಿಬೀಳಿಸುವಂತಿದೆ ಕಾಲೇಜು ಆವರಣದಲ್ಲಿ ನಡೆದಿರುವ ಘಟನೆ: ಪರೀಕ್ಷೆ ಬರೆದು ಬರುವಾಗಲೇ ವಿದ್ಯಾರ್ಥಿನಿಯ ಕುತ್ತಿಗೆ ಇರಿದ ಸಹಪಾಠಿ


ಪರೀಕ್ಷಾ ಕೊಠಡಿಯಿಂದ ಹೊರಬಂದ ವಿದ್ಯಾರ್ಥಿನಿಯ ಕುತ್ತಿಗೆಯನ್ನು ಸಹಪಾಠಿಯು ಇರಿದು ಕೊಲೆಗೈದ ಆಘಾತಕಾರಿ ಘಟನೆಯು ಕೇರಳದ ಕೊಟ್ಟಾಯಂ ಜಿಲ್ಲೆಯ ಪಳೈ ಪಟ್ಟಣದ ಸೇಂಟ್​ ಥಾಮಸ್​ ಕಾಲೇಜಿನಲ್ಲಿ ನಡೆದಿದೆ.

ಗಾಯಗೊಂಡ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆಗೆ ಆಕೆ ಮೃತಪಟ್ಟಿದ್ದಳು ಎನ್ನಲಾಗಿದೆ. ಇನ್ನು ಈ ಕೃತ್ಯವೆಸಗಿದ ವಿದ್ಯಾರ್ಥಿಯು ಕಾಲೇಜಿನಲ್ಲಿಯೇ ಇದ್ದು ಪೊಲೀಸರಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಅಪರಾದ ಕೃತ್ಯವೆಸಗಿದ ವಿದ್ಯಾರ್ಥಿಯನ್ನು 22 ವರ್ಷದ ಅಭಿಷೇಕ್​ ಬೈಜು ಎಂದು ಗುರುತಿಸಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಶ್ವವಿದ್ಯಾಲಯದ ಪರೀಕ್ಷೆಗಳು ನಡೆಯುತ್ತಿದ್ದು ಕೆಲವು ವಿದ್ಯಾರ್ಥಿಗಳು ಹೊರಗಡೆಗೆ ಇದ್ದರು ಎನ್ನಲಾಗಿದೆ. ಈ ಇಬ್ಬರೂ ವಿದ್ಯಾರ್ಥಿಗಳು ಪರೀಕ್ಷೆಯನ್ನು ಪೂರ್ಣಗೊಳಿಸಿ ಪರೀಕ್ಷಾ ಕೊಠಡಿಯಿಂದ ಹೊರಬಂದಿದ್ದರು.

ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ವಾಗ್ವಾದ ಏರ್ಪಟ್ಟಿತ್ತು. ಕೂಡಲೇ ವಿದ್ಯಾರ್ಥಿಯು ಚಾಕುವನ್ನು ತೆಗೆದುಕೊಂಡು ವಿದ್ಯಾರ್ಥಿನಿಯ ಕುತ್ತಿಗೆಗೆ ಇರಿದಿದ್ದಾನೆ. ಸ್ಥಳದಲ್ಲೇ ಕುಸಿದು ಬಿದ್ದ ವಿದ್ಯಾರ್ಥಿನಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಆಕೆ ಸಾವನ್ನಪ್ಪಿದ್ದಾಳೆ.

ಇಬ್ಬರೂ ಬಿಬಿಎ ಅಂತಿಮ ವರ್ಷದ ವಿದ್ಯಾರ್ಥಿಗಳಾಗಿದ್ದರು. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ ಎಂದು ಕೊಟ್ಟಾಯಂ ಎಸ್ಪಿ ಡಾ. ಶಿಲ್ಪಾ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...