alex Certify ಗಂಡನಿಂದ ದೂರವಾಗಿದ್ದ ಮಹಿಳೆ ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಸಹೋದ್ಯೋಗಿಯಿಂದಲೇ ಚಾಕು ಇರಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಂಡನಿಂದ ದೂರವಾಗಿದ್ದ ಮಹಿಳೆ ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಸಹೋದ್ಯೋಗಿಯಿಂದಲೇ ಚಾಕು ಇರಿತ

ಥಾಣೆ: ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ್ದರಿಂದ ಸಹೋದ್ಯೋಗಿಗೆ ಚಾಕುವಿನಿಂದ ಇರಿದ ವ್ಯಕ್ತಿಯೊಬ್ಬನ ವಿರುದ್ಧ ಮಹಾರಾಷ್ಟ್ರದ ಥಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಯೋಗೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಈತ 27 ವರ್ಷದ ಮಹಿಳೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಸುಮಾರು ಮೂರು ವರ್ಷಗಳಿಂದ ಪತಿಯಿಂದ ಬೇರ್ಪಟ್ಟಿದ್ದಾರೆ. ಅವರು ಯೋಗೇಶ್ ಕುಮಾರ್ ಅವರೊಂದಿಗೆ ಕಲಾಂಬೋಲಿ ಪ್ರದೇಶದ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಶಿಲ್-ದೈಘರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಯೋಗೇಶ್ ಕುಮಾರ್ ಮಹಿಳೆಯನ್ನು ಮದುವೆಯಾಗಲು ಕೇಳಿದ್ದರು. ಆದರೆ ಅವಳು ಆಸಕ್ತಿ ಹೊಂದಿರಲಿಲ್ಲ. ಮಂಗಳವಾರ, ಇಬ್ಬರು ಉತ್ತರಶಿವ್ ಪ್ರದೇಶಕ್ಕೆ ಮೋಟಾರ್‌ ಬೈಕ್‌ನಲ್ಲಿ ಪ್ರಯಾಣ ಬೆಳೆಸಿದ್ದಾರೆ ಮಾರ್ಗ ಮಧ್ಯೆ ಯೋಗೇಶ್‌ ಕುಮಾರ್‌ ಬೈಕ್‌ ನಿಲ್ಲಿಸಿ ತನ್ನನ್ನು ಮದುವೆಯಾಗುವಂತೆ ಮಹಿಳೆಗೆ ಮನವಿ ಮಾಡಿದ್ದಾನೆ. ಮಹಿಳೆ ತನ್ನ ನಿಲುವಿನಲ್ಲಿ ದೃಢವಾಗಿ ತಿರಸ್ಕರಿಸಿದ್ದಾಳೆ. ಮತ್ತೊಂದು ಮದುವೆಯಾಗಲು ನಾನು ಕಾನೂನುಬದ್ಧವಾಗಿ ಪತಿಯಿಂದ ಬೇರ್ಪಟ್ಟಿಲ್ಲ ಎಂದು ಅವನಿಗೆ ನೆನಪಿಸಿದ್ದಾಳೆ.

ಇದರಿಂದ ಕೋಪಗೊಂಡ ಯೋಗೇಶ್ ತನ್ನ ಬಳಿಯಿದ್ದ ಚಾಕುವನ್ನು ಹೊರತೆಗೆದು ಮಹಿಳೆಯನ್ನು ಇರಿದು ಪರಾರಿಯಾಗಿದ್ದಾನೆ. ಆಟೋ ಚಾಲಕ ಮಹಿಳೆಯನ್ನು ಕಲ್ವಾ ಸಿವಿಲ್ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಆಕೆಯ ಮುಖ ಮತ್ತು ಹೊಟ್ಟೆಗೆ ಇರಿತದ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...