alex Certify ಗ್ರಾಮದ ಹೊರವಲಯದಲ್ಲಿ ಮಹಿಳೆಯೊಂದಿಗೆ ಏಕಾಂತದಲ್ಲಿದ್ದವನಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮದ ಹೊರವಲಯದಲ್ಲಿ ಮಹಿಳೆಯೊಂದಿಗೆ ಏಕಾಂತದಲ್ಲಿದ್ದವನಿಗೆ ಬಿಗ್ ಶಾಕ್

ಮಂಡ್ಯ: ಮಹಿಳೆಯೊಂದಿಗೆ ಏಕಾಂತದಲ್ಲಿದ್ದ ಯುವಕನ ಮೇಲೆ ಹಲ್ಲೆ ನಡೆಸಿ 30 ಸಾವಿರ ರೂ. ದೋಚಿದ ಘಟನೆ ಮಂಡ್ಯದಲ್ಲಿ ನಡೆದಿದೆ.

ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಸ್ನೇಹಿತರಿಂದಲೇ ಹನಿಟ್ರ್ಯಾಪ್ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಗಿರೀಶ್ ಎಂಬಾತ ಮಂಡ್ಯ ಸಮೀಪದ ಕೊತ್ತತ್ತಿ ಹೊರವಲಯದಲ್ಲಿ ಮಹಿಳೆಯೊಂದಿಗೆ ಏಕಾಂತದಲ್ಲಿದ್ದ ವೇಳೆ ರವಿಚಂದ್ರ, ಕಾರ್ತಿಕ್, ಕಿರಣ್, ಮಂಜು ದಾಳಿ ಮಾಡಿ ಹಲ್ಲೆ ನಡೆಸಿದ್ದು, ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ.

ಕಿರಣ್ ಬಳಿ ಗಿರೀಶ ಮಹಿಳೆ ಬೇಕೆಂದು ಹೇಳಿಕೊಂಡಿದ್ದ. ಕಿರಣ್ ಮಳವಳ್ಳಿ ಮೂಲದ ಮಹಿಳೆಯ ನಂಬರ್ ಕೊಟ್ಟಿದ್ದ. ಗಿರೀಶ್ ಆಕೆಯನ್ನು ಕರೆಸಿಕೊಂಡು ಕೊತ್ತತ್ತಿ ಹೊರವಲಯದ ದೇವಾಲಯದ ಬಳಿ ಏಕಾಂತದಲ್ಲಿದ್ದ ವೇಳೆಯಲ್ಲಿ ಈ ನಾಲ್ವರು ದಾಳಿ ಮಾಡಿ ಹಲ್ಲೆ ನಡೆಸಿ ಹಣ ಕಸಿದು ಪರಾರಿಯಾಗಿದ್ದಾರೆ. ಮಹಿಳೆ ಕೂಡ ಅವರೊಂದಿಗೆ ಹೋಗಿದ್ದಾಳೆ. ಬಳಿಕ ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದು ಹನಿಟ್ರ್ಯಾಪ್ ಎಂಬ ಮಾಹಿತಿ ಕಲೆಹಾಕಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...