alex Certify ಫೆ. 7 ರಂದು ಮಂಡ್ಯ ಬಂದ್ ಗೆ ಕರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆ. 7 ರಂದು ಮಂಡ್ಯ ಬಂದ್ ಗೆ ಕರೆ

ಮಂಡ್ಯ: ಹನುಮ ಧ್ವಜ ತೆರವು ಪ್ರಕರಣದಲ್ಲಿ ಮಂಡ್ಯ ಜಿಲ್ಲೆಯ ಶಾಂತಿ ಸೌಹಾರ್ದತೆಗೆ ಧಕ್ಕೆ ತಂದ ಶಕ್ತಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಫೆಬ್ರವರಿ 7ರಂದು ಮಂಡ್ಯ ಬಂದ್ ಗೆ ಪ್ರಗತಿಪರ ಸಂಘಟನೆಗಳು ಕರೆ ನೀಡಿವೆ.

ವೇದಿಕೆಯ ಮುಖಂಡ ಎಂ.ಬಿ. ನಾಗಣ್ಣಗೌಡ ಈ ಬಗ್ಗೆ ಮಾಹಿತಿ ನೀಡಿದ್ದು, ಕ್ಷುಲ್ಲಕ ವಿಚಾರ ಮುಂದಿಟ್ಟುಕೊಂಡು ಮಂಡ್ಯ ಜಿಲ್ಲೆಯ ಹೋರಾಟ ಪರಂಪರೆಗೆ ಮಸಿ ಬಳಿಯುವ ಪ್ರಯತ್ನ ನಡೆದಿದೆ. ಇದರೊಂದಿಗೆ ಜನರ ಶಾಂತಿ ನೆಮ್ಮದಿ ಕೆಡಿಸುತ್ತಿರುವ ಶಕ್ತಿಗಳ ವಿರುದ್ಧ ಹೋರಾಟ ಅನಿವಾರ್ಯವಾಗಿದ್ದು, ಸಮಾನ ಮನಸ್ಕ ವೇದಿಕೆಯಡಿ ವಿವಿಧ ಸಂಘಟನೆಗಳು ಒಂದಾಗಿ ಮಂಡ್ಯ ನಗರ ಬಂದ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕಾನೂನು ಪಾಲಿಸದೇ ಶಾಂತಿ ಕದಡುವ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ಅವರು, ರೈತ ಸಂಘ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಕ್ಷಣಾ ವೇದಿಕೆ, ಸಿಐಟಿಯು, ರೈತ ಸಂಘಟ ಸೇರಿ 20ಕ್ಕೂ ಹೆಚ್ಚು ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...