alex Certify BREAKING NEWS: ಪ್ರೀತಿಸುವಂತೆ ಬಾಲಕರ ಒತ್ತಾಯ: ಕಿರುಕುಳಕ್ಕೆ ನೊಂದು ಬಾಲಕಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪ್ರೀತಿಸುವಂತೆ ಬಾಲಕರ ಒತ್ತಾಯ: ಕಿರುಕುಳಕ್ಕೆ ನೊಂದು ಬಾಲಕಿ ಆತ್ಮಹತ್ಯೆ

ಮಂಡ್ಯ: ಪ್ರೀತಿಸುವಂತೆ ಒತ್ತಾಯಿಸಿ ಬಾಲಕರು ಗಲಾಟೆ ಮಾಡಿ ಕಿರುಕುಳ ನೀಡಿದ್ದಕ್ಕೆ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ನಡೆದಿದೆ.

15 ವರ್ಷದ ಇಂಪನಾ ಆತ್ಮಹತ್ಯೆಗೆ ಶರಣಾಗಿರುವ ಬಾಲಕಿ. ಹನಕೆರೆ ಗ್ರಾಮದ ಬಾಲಕರು ಯುವತಿಗೆ ಪ್ರೀತಿಸುವಂತೆ ಒತ್ತಾಯಿಸಿದ್ದರು. ಇದೇ ವಿಚಾರವಾಗಿ ಬಾಲಕರ ನಡುವೆ ಗಲಾಟೆಯಾಗಿ ಮಾತಿನ ಚಕಮಕಿ ಕೂಡ ನಡೆದಿತ್ತು.

ಗಲಾಟೆ, ಮಾತಿನ ಚಕಮಕಿ ಆಡಿಯೋವನ್ನು ಬಾಲಕಿ ತಾಯಿಗೆ ವಾಟ್ಸಪ್ ಮಾಡಿದ್ದರು. ಇದರಿಂದ ಮನನೊಂದ ಇಂಪನಾ, ಮನೆಯಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾಳೆ.

ಬಾಲಕಿ ಆತ್ಮಹತ್ಯೆಗೆ ಶರಣಾಗುತ್ತಿದ್ದಂತೆ ಬಾಲಕರು ಗ್ರಾಮದಿಂದ ಎಸ್ಕೇಪ್ ಆಗಿದ್ದಾರೆ. ಮಂಡ್ಯ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...