alex Certify 2024ರಲ್ಲಿ ಮಂಡ್ಯದಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2024ರಲ್ಲಿ ಮಂಡ್ಯದಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2024ರಲ್ಲಿ ಮಂಡ್ಯದಲ್ಲಿಯೇ ನಡೆಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಹೇಳಿದ್ದಾರೆ.

ಯಾವ ತಿಂಗಳಲ್ಲಿ ಸಮ್ಮೇಳನ ನಡೆಸಿದರೆ ಸೂಕ್ತ ಎಂಬ ಅಭಿಪ್ರಾಯ ಸಂಗ್ರಹಿಸಿ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಶೀಘ್ರದಲ್ಲಿ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

2024ರ ಜನವರಿಯಲ್ಲಿ ಸಮ್ಮೇಳನ ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ಸಮ್ಮೇಳನದ ಸ್ಥಳ ಪರಿಶೀಲನೆ ನಡೆಸಲಾಗಿತ್ತು. ಬರ ಪರಿಸ್ಥಿತಿ ಎದುರಾಗಿರುವುದರಿಂದ ಇಂತಹ ಸಂದರ್ಭದಲ್ಲಿ ನಡೆಸುವುದು ಸೂಕ್ತವಲ್ಲ ಎಂದು ತೀರ್ಮಾನಿಸಿ ಮುಂದೂಡಲಾಗಿದೆ. ಮಂಡ್ಯ ಸಾಹಿತ್ಯ ಸಮ್ಮೇಳನವನ್ನು ರದ್ದು ಮಾಡಿಲ್ಲ, ಮುಂದೂಡಲಾಗಿದ್ದು, 2024ರಲ್ಲಿ ಮಂಡ್ಯದಲ್ಲಿಯೇ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...