alex Certify ಕಲುಷಿತ ನೀರು ಸೇವಿಸಿ ಮಹಿಳೆಯರಿಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲುಷಿತ ನೀರು ಸೇವಿಸಿ ಮಹಿಳೆಯರಿಬ್ಬರು ಸಾವು

ಮಂಡ್ಯ: ಕಲುಷಿತ ನೀರು ಸೇವಿಸಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಕಲುಷಿತ ನೀರು ಸೇವನೆಯಿಂದ ವಾಂತಿ ಭೇದಿಯಾಗಿ ತೀವ್ರ ಅಸ್ವಸ್ಥರಾಗಿದ್ದ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, 12 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಭಾರತಿಪುರ ಕ್ರಾಸ್ ಗ್ರಾಪಂ ವ್ಯಾಪ್ತಿಯ ಮಾರನಹಳ್ಳಿಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಲುಷಿತ ನೀರು ಸೇವನೆಯಿಂದ ಮಹಿಳೆಯರು ಮೃತಪಟ್ಟಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ. ಆದರೆ ತಾಲೂಕು ಆರೋಗ್ಯ ಅಧಿಕಾರಿಗಳು ಇದನ್ನು ತಳ್ಳಿ ಹಾಕಿದ್ದಾರೆ.

ಜವರಮ್ಮ(90), ಚಿಕ್ಕಮ್ಮ(75) ವಾಂತಿ ಭೇದಿಯಿಂದ ಅಸ್ವಸ್ಥರಾಗಿ ಮೃತಪಟ್ಟವರು. ಮಾಕಮ್ಮ(60), ನಿಂಗೇಗೌಡ(70), ಸಣ್ಣಮ್ಮ(50) ಹಾಗೂ ಮತ್ತಿಬ್ಬರು ಹಾಸನದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮಕ್ಕೆ ಕೊಳವೆ ಬಾವಿ ಮೂಲಕ ನೀರು ಸರಬರಾಜಾಗುತ್ತಿದ್ದು, ಯಾವುದೇ ಸಮಸ್ಯೆ ಇಲ್ಲ. ಆದರೆ ಘಟಕದ ಮೂಲಕ ಪೂರೈಕೆ ಆಗುತ್ತಿರುವ ನೀರು ಕುಡಿದ ಗ್ರಾಮಸ್ಥರು ವಾಂತಿ ಭೇದಿಗೆ ತುತ್ತಾಗಿದ್ದಾರೆ. ಈ ನೀರು ಕೂಡ ಕುಡಿಯಲು ಯೋಗ್ಯವಾಗಿದೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...