alex Certify ಮಂಗಳೂರಲ್ಲಿ ತಡರಾತ್ರಿ ಯುವಕನಿಗೆ ಚಾಕು ಇರಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಗಳೂರಲ್ಲಿ ತಡರಾತ್ರಿ ಯುವಕನಿಗೆ ಚಾಕು ಇರಿತ

ಮಂಗಳೂರು: ಮಂಗಳೂರು ಹೊರವಲಯದಲ್ಲಿ ದುಷ್ಕರ್ಮಿಗಳು ಯುವಕನಿಗೆ ಚಾಕುವಿನಿಂದ ಇರಿದ ಘಟನೆ ತಡರಾತ್ರಿ ನಡೆದಿದೆ.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಉಳ್ಳಾಲ ಕೋಟೆಪುರ ನಿವಾಸಿ ಸದಾಕತ್ ಉಲ್ಲಾ(34) ಎಂಬುವರಿಗೆ ಚಾಕುವಿನಿಂದ ಇರಿಯಲಾಗಿದೆ. ಸದಾಕತ್ ಉಲ್ಲಾನನ್ನು ಮನೆಯಿಂದ ಹೊರಗೆ ಕರೆಸಿಕೊಂಡಿದ್ದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿ ಪರಾರಿಯಾಗಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಶಾಸಕ ಯು.ಟಿ. ಖಾದರ್ ಆಸ್ಪತ್ರೆಗೆ ಭೇಟಿ ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...