alex Certify ಮಂಗಳೂರಿನಲ್ಲಿ ಮೋದಿ ಭರ್ಜರಿ ರೋಡ್ ಶೋ: ಕಿಕ್ಕಿರಿದು ಸೇರಿದ ಜನರಿಂದ ಹೂವಿನ ಸುರಿಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಗಳೂರಿನಲ್ಲಿ ಮೋದಿ ಭರ್ಜರಿ ರೋಡ್ ಶೋ: ಕಿಕ್ಕಿರಿದು ಸೇರಿದ ಜನರಿಂದ ಹೂವಿನ ಸುರಿಮಳೆ

ಮಂಗಳೂರು: ಲೋಕಸಭೆ ಚುನಾವಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದು ಮೈಸೂರಿನಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದ ನಂತರ ಕರಾವಳಿ ನಗರಿ ಮಂಗಳೂರಿಗೆ ಆಗಮಿಸಿದ್ದಾರೆ.

ನಾರಾಯಣ ಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ರೋಡ್ ಶೋ ಆರಂಭವಾಗಿದೆ. ರಸ್ತೆಯ ಎರಡೂ ಬದಿಗಳಲ್ಲಿ ಜನ ಕಿಕ್ಕಿರಿದು ಸೇರಿದ್ದಾರೆ. ಸುಮಾರು ಎರಡು ಕಿಲೋಮೀಟರ್ ದೂರ ಪ್ರಧಾನಿಯವರ ರೋಡ್ ಶೋ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮೋದಿ ರೋಡ್ ಶೋ ಮೂಲಕ ಪ್ರಚಾರ ನಡೆಸಿದ್ದಾರೆ.

ರಸ್ತೆಯ ಇಕ್ಕೆಲಗಳಲ್ಲಿ ಬಿಜೆಪಿ, ಮೋದಿ ಪರ ಜಯಘೋಷ ಮೊಳಗಿದ್ದು, ಅಭಿಮಾನಿಗಳು ಹೂವಿನ ಮಳೆ ಸುರಿಸಿದ್ದಾರೆ. ಜೈಶ್ರೀರಾಮ್ ಘೋಷಣೆಯಂತೂ ಮುಗಿಲು ಮುಟ್ಟಿದೆ. ದಾರಿಯುದ್ದಕ್ಕೂ ಮೋದಿ ಕಮಲದ ಚಿಹ್ನೆ ಕೈಯಲ್ಲಿಡಿದು ಜನರತ್ತ ಕೈ ಬೀಸಿದ್ದಾರೆ. ಅವರಿಗೆ ಅಭ್ಯರ್ಥಿಗಳಾದ ಕೋಟ ಶ್ರೀನಿವಾಸ ಪೂಜಾರಿ, ಬ್ರಿಜೇಶ್ ಚೌಟ ಸಾಥ್ ನೀಡಿದ್ದಾರೆ. ರಸ್ತೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...