alex Certify ವರ್ಷದ ಕೊನೆಯ ‘ಮನ್ ಕಿ ಬಾತ್’ನಲ್ಲಿ ಮೋದಿ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಷದ ಕೊನೆಯ ‘ಮನ್ ಕಿ ಬಾತ್’ನಲ್ಲಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ಈ ಕೊನೆಯ ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಮೋದಿ 2021 ರಲ್ಲಿ ಭಾರತದ ಶಕ್ತಿ ಇನ್ನಷ್ಟು ವೃದ್ಧಿಸಲಿದೆ ಎಂದು ಹೇಳಿದ್ದಾರೆ.

ಕೊರೋನಾ ಕಾರಣದಿಂದ ಅನೇಕ ಸಮಸ್ಯೆ ಎದುರಾಗಿದೆ. ಸಂಕಷ್ಟ, ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಭಾರತ ಮತ್ತಷ್ಟು ಬಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2020 ರಲ್ಲಿ ಏನೇನಾಗಿದೆ ಎಂಬುದನ್ನು ಯಾರೂ ಊಹಿಸಿರಲಿಲ್ಲ. ಕೊರೊನಾದಿಂದ ಉತ್ಪಾದನೆ ಸೇರಿ ಹಲವು ಸಮಸ್ಯೆ ಎದುರಾಗಿದೆ. ಪ್ರತಿ ಸಂಕಷ್ಟದಿಂದಲೂ ಹೊಸ ಪಾಠ ಕಲಿಯಲು ಅವಕಾಶ ಸಿಕ್ಕಂತಾಗಿದೆ. ಭಾರತ ಎಲ್ಲ ಸವಾಲುಗಳನ್ನು ಮೆಟ್ಟಿ ನಿಂತು ಮುಂದೆ ಸಾಗುತ್ತಿದೆ ಎಂದು ಹೇಳಿದ್ದಾರೆ.

ಹೊಸ ವರ್ಷದಂದು ಪರಸ್ಪರ ಶುಭಾಶಯ ಕೋರುತ್ತೇವೆ. ಈ ಬಾರಿ ನಾವು ದೇಶಕ್ಕೆ ಶುಭಾಶಯ ಕೊರೋಣ. 2021 ರಲ್ಲಿ ಭಾರತ ಹೊಸ ಸಾಧನೆಯ ಶಿಖರಕ್ಕೆ ಏರಲಿ ಎಂದು ಆಶಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...