alex Certify ಮದುವೆ ನೆಪದಲ್ಲಿ ಯುವತಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿದ ಯುವಕ ಆಸ್ಪತ್ರೆಯಲ್ಲೇ ತಾಳಿ ಕಟ್ಟಿ ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆ ನೆಪದಲ್ಲಿ ಯುವತಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿದ ಯುವಕ ಆಸ್ಪತ್ರೆಯಲ್ಲೇ ತಾಳಿ ಕಟ್ಟಿ ನಾಪತ್ತೆ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ ಯುವಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ. ಬೆಂಗಳೂರಿನ ಸೋಲದೇವನಹಳ್ಳಿ ಠಾಣೆಯಲ್ಲಿ ಈ ಕುರಿತಾಗಿ ಪ್ರಕರಣ ದಾಖಲಾಗಿದೆ.

ಖಾಸಗಿ ಲ್ಯಾಬ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ತನ್ನೊಂದಿಗೆ ಕೆಲಸ ಮಾಡುತ್ತಿದ್ದ ಸಾಗರ್ ಎಂಬುವನನ್ನು ಪ್ರೀತಿಸಿದ್ದಾಳೆ. ಮದುವೆಯಾಗುವುದಾಗಿ ನಂಬಿಸಿದ ಸಾಗರ್ ಯುವತಿಯೊಂದಿಗೆ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಯುವತಿ ಗರ್ಭಿಣಿಯಾಗಿರುವುದನ್ನು ತಿಳಿದ ಆರೋಪಿ ಸಾಗರ್ ಗರ್ಭಪಾತ ಮಾತ್ರೆ ನುಂಗಿಸಿ ಭ್ರೂಣ ಹತ್ಯೆ ಮಾಡಿದ್ದಾನೆ. ಈ ವಿಷಯ ತಿಳಿದ ಸಂತ್ರಸ್ತ ಯುವತಿಯ ಸಹೋದರಿ ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದ್ದಾರೆ.

ಇದರಿಂದ ಹೆದರಿಕೊಂಡ ಸಾಗರ್ ಆಸ್ಪತ್ರೆಯಲ್ಲಿ ಹಿರಿಯರ ಸಮ್ಮುಖದಲ್ಲಿ ಸಂತ್ರಸ್ತೆಗೆ ತಾಳಿ ಕಟ್ಟಿದ್ದು, ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆ ನೋಂದಣಿ ಮಾಡಿಸಲು ಒಪ್ಪಿಕೊಂಡಿದ್ದಾನೆ. ಆದರೆ, ತಾಳಿ ಕಟ್ಟಿದ ನಂತರ ಆರೋಪಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...