alex Certify ಕಸ ವಿಲೇವಾರಿ ವೇಳೆ ಅವಘಡ..! ಬೆಂಕಿಯ ಕೆನ್ನಾಲಿಗೆಗೆ ತುತ್ತಾದ ಕಾಲೇಜು ಕಟ್ಟಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಸ ವಿಲೇವಾರಿ ವೇಳೆ ಅವಘಡ..! ಬೆಂಕಿಯ ಕೆನ್ನಾಲಿಗೆಗೆ ತುತ್ತಾದ ಕಾಲೇಜು ಕಟ್ಟಡ

ಕೇರಳದ ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ಇಂದು ಭಾರೀ ದೊಡ್ಡ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್​ ಈ ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಆಸ್ಪತ್ರೆಯ ಹಿಂಬಂದಿಯಲ್ಲಿದ್ದ ಕಸದ ರಾಶಿಯನ್ನು ವಿಲೇವಾರಿ ಮಾಡುತ್ತಿದ್ದ ವೇಳೆಯಲ್ಲಿ ಕಸದ ರಾಶಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಕಸದ ರಾಶಿಯಿಂದ ದೊಡ್ಡ ಪ್ರಮಾಣದಲ್ಲಿ ಹೊಗೆ ಆವರಿಸುತ್ತಿದ್ದಂತೆಯೇ ಕಾಲೇಜಿನ ಸಿಬ್ಬಂದಿ ಕಟ್ಟಡದಿಂದ ಹೊರನಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಬೆಂಕಿಯ ಕೆನ್ನಾಲಿಗೆಗೆ ಸಿಬ್ಬಂದಿಯ ಬ್ಯಾಗ್ ಸೇರಿ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಎರಡು ಅಗ್ನಿಶಾಮಕ ದಳ ಸೇರಿದಂತೆ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...