alex Certify ದೊಡ್ಮನೆ ಕುಟುಂಬದಿಂದ ಅಪ್ಪು ಅಭಿಮಾನಿಗಳಿಗೆ ಅನ್ನ ಸಂತರ್ಪಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೊಡ್ಮನೆ ಕುಟುಂಬದಿಂದ ಅಪ್ಪು ಅಭಿಮಾನಿಗಳಿಗೆ ಅನ್ನ ಸಂತರ್ಪಣೆ

ಬೆಂಗಳೂರು: ದೊಡ್ಮನೆಯಿಂದ ಇಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿಮಾನಿಗಳು ಮತ್ತು ಗಣ್ಯರಿಗೆ ಅನ್ನಸಂತರ್ಪಣೆ ಆಯೋಜಿಸಲಾಗಿದೆ.

ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬಾಳೆ ಎಲೆಯಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಸೌದೆ ಒಲೆಯಲ್ಲಿ ಅಡುಗೆ ಸಿದ್ಧವಾಗುತ್ತಿದೆ. ನಾನ್ ವೆಜ್ ಮತ್ತು ವೆಜ್ ಅಡುಗೆ ಸಿದ್ಧಪಡಿಸಲಾಗುತ್ತಿದ್ದು, ಗೀ ರೈಸ್, ಚಿಕನ್ ಚಾಪ್ಸ್, ಚಿಕನ್ ಕಬಾಬ್, ಕೋಳಿ ಮೊಟ್ಟೆ, ಸಸ್ಯಾಹಾರಿಗಳಿಗೆ ಭಕ್ಷ ಭೋಜನ ಸಿದ್ಧಪಡಿಸಲಾಗಿದೆ. ಬೇಬಿ ಕಾರ್ನ್, ಕುರ್ಮಾ, ಅಕ್ಕಿ ಪಾಯಸ, ಮಸಾಲೆ ವಡೆ ಅನ್ನ ಮತ್ತು ರಸಂ ಮೊದಲಾದವುಗಳನ್ನು ಸಿದ್ಧಪಡಿಸಲಾಗುತ್ತಿದೆ. 50 ಸಾವಿರ ಜನ ಬರುವ ನಿರೀಕ್ಷೆಯಿದ್ದು, ಎಲ್ಲರಿಗೂ ಅಡುಗೆಯನ್ನು ಸಿದ್ಧಪಡಿಸಲಾಗುತ್ತಿದೆ.

4000 ಮಾಂಸಹಾರಿಗಳು, 1000 ಸಸ್ಯಹಾರಿಗಳು ಏಕಕಾಲದಲ್ಲಿ ಕುಳಿತುಕೊಂಡು ಊಟ ಮಾಡಲು ವ್ಯವಸ್ಥೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...