alex Certify ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಬಿಸಿಯೂಟ, ಕ್ಷೀರ ಭಾಗ್ಯ ಯೋಜನೆಗೆ ಸಿದ್ಧತೆ ಕೈಗೊಳ್ಳಲು ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಬಿಸಿಯೂಟ, ಕ್ಷೀರ ಭಾಗ್ಯ ಯೋಜನೆಗೆ ಸಿದ್ಧತೆ ಕೈಗೊಳ್ಳಲು ಸೂಚನೆ

ಬೆಂಗಳೂರು: 2023 -24 ನೇ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮಧ್ಯಾಹ್ನದ ಬಿಸಿಯೂಟ ಮತ್ತು ಕ್ಷೀರ ಭಾಗ್ಯ ಯೋಜನೆ ಅನುಷ್ಠಾನಕ್ಕೆ ಅಗತ್ಯ ಪೂರ್ವಭಾವಿ ಸಿದ್ಧತೆ ಕೈಗೊಳ್ಳಲು ಶಿಕ್ಷಣ ಇಲಾಖೆ ವತಿಯಿಂದ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ರಜೆ ಅವಧಿಯಲ್ಲಿ ಉಳಿಕೆಯಾದ ಅಕ್ಕಿ, ಗೋಧಿ, ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ ಮತ್ತು ಹಾಲಿನ ಪುಡಿ ಸೇರಿದಂತೆ ಇತರೆ ಪದಾರ್ಥಗಳನ್ನು ಪರಿಶೀಲಿಸಿ ದಾಖಲಿಸಬೇಕು. ಅವಧಿ ಮುಗಿದ ಪದಾರ್ಥಗಳಿದ್ದರೆ ಅವುಗಳನ್ನು ಬಿಸಿಯೂಟಕ್ಕೆ ಬಳಕೆ ಮಾಡಬಾರದು ಎಂದು ತಿಳಿಸಲಾಗಿದೆ.

ಕಳಪೆಯಾದ, ಹುಳ ತಿಂದ ಹಾಗೂ ಗುಣಮಟ್ಟ ಹಾಳಾದ, ಕೊಳೆತ ಆಹಾರ ಪದಾರ್ಥಗಳನ್ನು ಬೇರ್ಪಡಿಸಿ ಹೊರಹಾಕುವಂತೆ ಶಿಕ್ಷಣ ಇಲಾಖೆ ಆಯುಕ್ತ ಡಾ.ಆರ್.  ವಿಶಾಲ್ ಸುತ್ತೋಲೆ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...