alex Certify ಕೊರೊನಾ 3ನೇ ಅಲೆ ಕುರಿತು ತಜ್ಞರು ನೀಡಿದ್ದಾರೆ ಈ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ 3ನೇ ಅಲೆ ಕುರಿತು ತಜ್ಞರು ನೀಡಿದ್ದಾರೆ ಈ ಎಚ್ಚರಿಕೆ

ಭಾರತದಲ್ಲಿ ಕೊರೊನಾ ವೈರಸ್ ಸೋಂಕು ನಿರಂತರವಾಗಿ ಹೆಚ್ಚುತ್ತಿದೆ. ಪ್ರತಿದಿನ ಸುಮಾರು 30 ಸಾವಿರಕ್ಕೂ  ಹೊಸ ಪ್ರಕರಣಗಳು ವರದಿಯಾಗುತ್ತಿವೆ. ದೇಶದಲ್ಲಿ ಕೋವಿಡ್ -19 ರ ಮೂರನೇ ಅಲೆ ಯಾವಾಗ ಬರಲಿದೆ ಎಂಬ ಪ್ರಶ್ನೆಗೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ರಚಿಸಿದ ಸಮಿತಿಯು ಉತ್ತರ ನೀಡಿದೆ. ಅಕ್ಟೋಬರ್ ವೇಳೆಗೆ ಮೂರನೇ ಅಲೆ ಉತ್ತುಂಗಕ್ಕೇರಬಹುದು ಎಂದು ಅಂದಾಜಿಸಿದೆ.

ಎನ್‌ಐಡಿಎಂ ಅಡಿಯಲ್ಲಿ ರಚಿಸಲಾದ ತಜ್ಞರ ಸಮಿತಿಯು, ಕೊರೊನಾ ವೈರಸ್‌ನ ಮೂರನೇ ಅಲೆ ಬಗ್ಗೆ ಎಚ್ಚರಿಕೆ ನೀಡಿದೆ. ಕೋವಿಡ್ -19 ರ ಮೂರನೇ ತರಂಗವು ಅಕ್ಟೋಬರ್ ವೇಳೆಗೆ ಉತ್ತುಂಗಕ್ಕೇರಬಹುದು ಎಂದು ವರದಿಯಲ್ಲಿ ಹೇಳಲಾಗಿದೆ.

ವರದಿ ಪ್ರಕಾರ, ಕೋವಿಡ್ -19 ರ ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯ ಹೆಚ್ಚಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಮಕ್ಕಳಿಗೆ ಉತ್ತಮ ವೈದ್ಯಕೀಯ ವ್ಯವಸ್ಥೆ ಮಾಡುವ ಅಗತ್ಯವಿದೆ ಎಂದು ಸಮಿತಿ ಹೇಳಿದೆ. ಮಕ್ಕಳಿಗೆ ಯಾವುದೇ ವೈದ್ಯಕೀಯ ಸೌಲಭ್ಯಗಳಿಲ್ಲ. ವೈದ್ಯರು, ಸಿಬ್ಬಂದಿ, ವೆಂಟಿಲೇಟರ್‌ಗಳು, ಆಂಬ್ಯುಲೆನ್ಸ್ ಇತ್ಯಾದಿ ಸಾಧನಗಳು ಇಲ್ಲ ಎಂದು ಸಮಿತಿ ಹೇಳಿದೆ. ಹೆಚ್ಚಿನ ಸಂಖ್ಯೆಯ ಮಕ್ಕಳು ಸೋಂಕಿಗೆ ಒಳಗಾದ ಸಂದರ್ಭದಲ್ಲಿ ಇವುಗಳಿಗೆ ಬೇಡಿಕೆ ಹೆಚ್ಚಾಗುತ್ತದೆ. ಹಾಗಾಗಿ ಈಗಿನಿಂದಲೇ ವ್ಯವಸ್ಥೆ ಮಾಡಬೇಕೆಂದು ಸಮಿತಿ ಹೇಳಿದೆ.

ಕೇಂದ್ರ ಗೃಹ ಸಚಿವಾಲಯದ ಸೂಚನೆಗಳ ಮೇಲೆ ರಚಿಸಲಾದ ಸಮಿತಿಯು ತನ್ನ ವರದಿಯನ್ನು ಪ್ರಧಾನ ಮಂತ್ರಿ ಕಚೇರಿಗೆ ಸಲ್ಲಿಸಿದೆ. ವರದಿಯಲ್ಲಿ, ತೀವ್ರವಾಗಿ ಅನಾರೋಗ್ಯಕ್ಕೀಡಾಗಿರುವ ಮತ್ತು ಅಂಗವಿಕಲ ಮಕ್ಕಳಿಗೆ ಆದ್ಯತೆಯ ಆಧಾರದ ಮೇಲೆ ಲಸಿಕೆ ಹಾಕುವಂತೆ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...