alex Certify ಹಾಲಿನ ದರ ಏರಿಕೆ ಆತಂಕದಲ್ಲಿದ್ದ ಗ್ರಾಹಕರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಲಿನ ದರ ಏರಿಕೆ ಆತಂಕದಲ್ಲಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ಬೆಂಗಳೂರು: ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವ ಯಾವುದೇ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ಪಶು ಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಲು ಒಕ್ಕೂಟದವರು ನಷ್ಟವಾಗುತ್ತಿದೆ ಎಂದು ಹೇಳಿದ್ದಾರೆ. ಆದರೆ, ನಮಗೆ ರೈತರು, ಗ್ರಾಹಕರ ಹಿತ ಮುಖ್ಯ. ಹಾಗಾಗಿ ಹಾಲಿನ ದರ ಏರಿಕೆ ತೀರ್ಮಾನ ಮಾಡಿಲ್ಲ. ರಾಜ್ಯದಲ್ಲಿ ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವ ಯಾವುದೇ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ತಿಳಿಸಿದ್ದಾರೆ.

ಬೇರೆ ರಾಜ್ಯಗಳಿಗೆ ಹೋಲಿಸಿದಾಗ ಕರ್ನಾಟಕದಲ್ಲಿ ಹಾಲಿನ ದರ ಕಡಿಮೆ ಇದೆ. ಆದರೂ ಎಲ್ಲರ ಹಿತವನ್ನು ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡುವ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...